ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೊಲ್ಕತ್ತಾದ ಎರಡು ಪ್ರದೇಶಗಳಲ್ಲಿನ ಲಾಕ್ಡೌನ್ ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ನಿವಾಸಿಗಳು ಮನೆಯಲ್ಲಿಯೇ ಇರಬೇಕೆಂದು ಒತ್ತಾಯಿಸಿದರು.
ಲಾಕ್ ಡೌನ್ ಕಾಲಾವಧಿಯಲ್ಲಿ ಅದು ವರ್ಕ್ ಫ್ರಮ್ ಹೋಮ್ ಆಗಿರಲಿ ಅಥವಾ ಆನ್ಲೈನ್ ಕ್ಲಾಸ್ ಆಗಿರಲಿ ಎಲ್ಲರಿಗೂ ತಮ್ಮದೇ ಆದ ಸಮಸ್ಯೆಗಳಿವೆ. ಆದರೆ, ಇವೆಲ್ಲವುಗಳ ನಡುವೆ ಸುಬ್ರತೋ ಅವರಂತಹ ಶಿಕ್ಷಕರೂ ಕೊಡ ಇದ್ದು, ಯಾವುದೇ ಒಂದು ಸಮಸ್ಯೆಯ ಪರಿಹಾರ ಕಂಡುಕೊಳ್ಳುವಲ್ಲಿ ನಿರತರಾಗಿದ್ದಾರೆ. ಹಾಗಾದರೆ ಬನ್ನಿ ಕೊಲ್ಕತ್ತಾ ಮೂಲದ ಈ ಹಿಸ್ಟರಿ ಟೀಚರ್ ಕಥೆ ಎಂದು ಅರಿಯೋಣ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಡೊಮ್ಕಲ್ ಪುರಸಭೆ ಪ್ರದೇಶದ ನೂರಾರು ಜನರು ಬುಧವಾರ ಬೆಳಿಗ್ಗೆ ಆಹಾರವಿಲ್ಲದಿದ್ದರಿಂದಾಗಿ ಮೂರು ಗಂಟೆಗಳ ಕಾಲ ರಾಜ್ಯ ಹೆದ್ದಾರಿಯನ್ನು ತಡೆ ಹಿಡಿದರು.
ಕೇಂದ್ರ ಆಹಾರ ಮತ್ತು ಪಡಿತರ ಪೂರೈಕೆ ಇಲಾಖೆಗೆ ಪತ್ರ ಬರೆದಿರುವ ದಿ ಇಂಡಿಯನ್ ಸ್ಪಿರಿಟ್ಸ್ & ವೈನ್ ಅಸೋಸಿಯೇಷನ್ ಆಫ್ ಇಂಡಿಯಾ, ಪಶ್ಚಿಮ ಬಂಗಾಳದಲ್ಲಿ ಮನೆಮನೆಗೆ ಮದ್ಯ ಸರಬರಾಜು ಮಾಡಲು ಅವಕಾಶ ಕೊಟ್ಟಿರುವಂತೆ ದೇಶದ ಬೇರೆ ಕಡೆ ಮದ್ಯ ಸರಬರಾಜು ಮಾಡುವುದಕ್ಕೆ ಅನುಮತಿ ಕೊಡಿ ಎಂದು ಕೇಳಿಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿನ ಟಿಎಂಸಿ ಶಾಸಕ ಜಯಂತ ನಾಸ್ಕರ್ ತಮ್ಮನ್ನು ಕೊಲ್ಲಬಹುದೆಂಬ ಭಯದಿಂದ ಸ್ವಂತ ಪ್ರತಿಮೆಗಳನ್ನು ನಿರ್ಮಿಸಿದ್ದಾರೆ, ಇದರಿಂದಾಗಿ ಅವರ ಮರಣದ ನಂತರ ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ ಎನ್ನುವ ಉದ್ದೇಶದಿಂದ ಅವರು ನಿರ್ಮಿಸಿದ್ದಾರೆ ಎನ್ನಲಾಗಿದೆ.
ಮುಂದಿನ ತಿಂಗಳು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಯುನಿಂದ ಹೊರಹಾಕಲ್ಪಟ್ಟ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಟಿಎಂಸಿ ಅಭ್ಯರ್ಥಿಯಾಗಬಹುದು ಎಂದು ಪಕ್ಷದ ಮೂಲವೊಂದು ಶನಿವಾರ ನವದೆಹಲಿಯಲ್ಲಿ ತಿಳಿಸಿದೆ.
ಕೇರಳ ಮತ್ತು ಪಂಜಾಬ್ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು 2019 ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನವರಿ 27 ರಂದು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ತರಲಿದೆ.
ಪೌರತ್ವ ಕೇಂದ್ರ ಸರ್ಕಾರದ ವಿಷಯವಾಗಿದ್ದು, ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಕಾನೂನುಗಳನ್ನು ಜಾರಿಗೊಳಿಸಲು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ. ಸದ್ಯ ಕೇರಳ, ಪಶ್ಚಿಮ ಬಂಗಾಳ ಹಾಗೂ ಪಂಜಾಬ್ ರಾಜ್ಯಗಳ ಮುಖ್ಯಮಂತ್ರಿಗಳು ಪೌರತ್ವ ಕಾಯ್ದೆಯನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂಬ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ಜಿತೇಂದ್ರ ಸಿಂಗ್ ಅವರ ಈ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ.
ಪಶ್ಚಿಮ ಬಂಗಾಳ, ಪಂಜಾಬ್, ಕೇರಳದ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪೌರತ್ವ ತಿದ್ದುಪತಿ ಕಾನೂನನ್ನು ಜಾರಿಗೊಳಿಸಲು ತಿರಸ್ಕರಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರಗಳು ಈ ಕಾಯ್ದೆಯನ್ನು ಜಾರಿಗೊಳಿಸಲು ನಿರಾಕರಿಸುವಂತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಈರುಳ್ಳಿ ಬೆಲೆ ಈಗ ಶತಕ ಬಾರಿಸಿದೆ, ಈ ಸಂದರ್ಭದಲ್ಲಿ ಕಳ್ಳನೊಬ್ಬ ಹಣವನ್ನು ಕಳ್ಳತನ ಮಾಡುವ ಬದಲು ಈರುಳ್ಳಿಯನ್ನು ಕದ್ದಿರುವ ಘಟನೆ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ನಡೆದಿದೆ.
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ತೀರಗಳತ್ತ ಚಂಡಮಾರುತವು ಸಾಗಲಿದೆ ಎಂದು ಹವಾಮಾನ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.