ರಾಜ್ಯದಲ್ಲಿ ಈ ಬಾರಿ ಅನೇಕ ಹೈ ವೋಲ್ಟೇಜ್ ಕ್ಷೇತ್ರಗಳಿದ್ದವು. ಅದರಲ್ಲಿ ಕಡೂರು ವಿಧಾನಸಭಾ ಕ್ಷೇತ್ರ ಕೂಡ ಒಂದು. ಮಾಜಿ ಶಾಸಕ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮಾನಸ ಪುತ್ರ, ವೈ ಎಸ್ ವಿ ದತ್ತ ಜೆಡಿಎಸ್ ಬಿಟ್ಟು, ಕಾಂಗ್ರೆಸ್ ಸೇರಿ, ಮತ್ತೆ ಜೆಡಿಎಸ್ ನಿಂದ ಸ್ಪರ್ಧೆ ಮಾಡಿ ಈ ಬಾರಿ ಸೋತಿದ್ದು, ಈ ಹಿನ್ನೆಲೆ ಇಂದು ಅವರ ಹುಟ್ಟೂರಾದ ಯಗಟಿಯ ಅವರ ಮನೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಸೋಲಿನ ಹಾಗೂ ಮಾಡಿದ ತಪ್ಪನ್ನು ಸರಿ ಪಡಿಸಿಕೊಳ್ಳುವ ಸಭೆ ನಡೆಸಿ, ನಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಾದಯಾತ್ರೆ ಮಾಡುತ್ತೇನೆ ಎಂದು ದತ್ತ ಹೇಳಿದ್ರು.