Viral News: ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಯಲ್ಲಿ 100 ಕೋಟಿ ರೂ. ಚೆಕ್ ಪತ್ತೆ!

100 Crore cheque: ಆರಂಭದಲ್ಲಿ 100 ಕೋಟಿ ರೂ. ಮೊತ್ತದ ಚೆಕ್ ಕಂಡು ಆಶ್ಚರ್ಯಚಕಿತರಾಗಿದ್ದ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲಿರುವ 17 ರೂ. ನೋಡಿ ಶಾಕ್ ಆಗಿದ್ದಾರೆ.

Written by - Puttaraj K Alur | Last Updated : Aug 24, 2023, 04:12 PM IST
  • ದೇವಸ್ಥಾನದ ಹುಂಡಿಗೆ ಬರೋಬ್ಬರಿ 100 ಕೋಟಿ ರೂ. ಮೊತ್ತದ ಚೆಕ್ ಹಾಕಿದ ಭಕ್ತ
  • ವಿಶಾಖಪಟ್ಟಣದ ಸಿಂಹಾಚಲಂನಲ್ಲಿರುವ ಪ್ರಸಿದ್ಧ ವರಾಹ ಲಕ್ಷ್ಮೀನರಸಿಂಹ ದೇವಸ್ಥಾನ
  • ದೇವಸ್ಥಾನದ ಹುಂಡಿ ಎಣಿಕೆ ವೇಳೆ ಪತ್ತೆಯಾದ ಈ ಚೆಕ್ ನೋಡಿ ಸಿಬ್ಬಂದಿಗಳಿಗೇ ಶಾಕ್ ಆಗಿದೆ
Viral News: ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಯಲ್ಲಿ 100 ಕೋಟಿ ರೂ. ಚೆಕ್ ಪತ್ತೆ!   title=
100 ಕೋಟಿ ರೂ. ಮೊತ್ತದ ಚೆಕ್ ಹಾಕಿದ ಭಕ್ತ!

ಆಂಧ್ರಪ್ರದೇಶ: ವಿಶಾಖಪಟ್ಟಣದ ಸಿಂಹಾಚಲಂನಲ್ಲಿರುವ ಪ್ರಸಿದ್ಧ ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಬರೋಬ್ಬರಿ 100 ಕೋಟಿ ರೂ. ಮೊತ್ತದ ಚೆಕ್ ಹಾಕಿದ್ದಾರೆ. ದೇವಸ್ಥಾನದ ಹುಂಡಿ ಎಣಿಕೆ ವೇಳೆ ಪತ್ತೆಯಾದ ಈ ಚೆಕ್ ನೋಡಿ ಸಿಬ್ಬಂದಿಗಳಿಗೇ ಶಾಕ್ ಆಗಿದೆ.   

ಪ್ರತಿ 15 ದಿನಗಳಿಗೊಮ್ಮೆ ಈ ಪ್ರಸಿದ್ಧ ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಪ್ರತಿಬಾರಿಯಂತೆ ಈ ಬಾರಿಯೂ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿತ್ತು. ಈ ವೇಳೆ ಅಪಾರ ಪ್ರಮಾಣದ ಅಂದರೆ ಬರೋಬ್ಬರಿ 100 ಕೋಟಿ ರೂ. ಮೊತ್ತದ ಚೆಕ್ ರೂಪದ ಕಾಣಿಕೆ ಪತ್ತೆಯಾಗಿದೆ. ಯಾರೋ ಭಕ್ತರೊಬ್ಬರು 100 ಕೋಟಿ ರೂ. ಮೊತ್ತದ ಚೆಕ್ ಅನ್ನು ದೇವಸ್ಥಾನದ ಹುಂಡಿಗೆ ಹಾಕಿದ್ದಾರೆ. ಅನುಮಾನದೊಂದಿಗೆ ಚೆಕ್ ಪರಿಶೀಲಿಸಿದ ಸಿಬ್ಬಂದಿ ದೇವಸ್ಥಾನದ ಅಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: "ನಿಮ್ಮ ಮಾಮನ್ನ ನಂಬಬೇಡಿ, ಈಗ ಚಾಚಾನ್ನ ನಂಬಿ"

ಅಚ್ಚರಿಯೆಂಬಂತೆ ಈ ಚೆಕ್‍ನಲ್ಲಿ ಮೊದಲಿಗೆ 10 ರೂ. ಎಂದು ಬರೆದು ಮತ್ತೆ 100 ಕೋಟಿ ರೂ. ಎಂದು ಬರೆದಿರುವುದು ಕಂಡುಬಂದಿದೆ. ತಮಾಷೆಗಾಗಿ ಈ ರೀತಿ ಮಾಡಿದ್ದಾರೆಂದು ಯೋಚಿಸಿದ ಅಧಿಕಾರಿಗಳು ಚೆಕ್ ಮೇಲಿನ ವಿವರಗಳನ್ನು ಪರಿಶೀಲಿಸಿದ್ದಾರೆ.

ಈ ಚೆಕ್ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವರ ಉಳಿತಾಯ ಖಾತೆಗೆ ಸೇರಿದ್ದು ಎಂಬುದು ಗೊತ್ತಾಗಿದೆ. ಉಳಿತಾಯದ ಖಾತೆಯಿಂದ 100 ಕೋಟಿ ರೂ. ಮೊತ್ತವನ್ನು ನೀಡಲು ಸಾಧ್ಯವೇ? ಎಂದು ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಸಂಬಂಧಿಸಿದ ಬ್ಯಾಂಕ್‍ಗೆ ಹೋಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಬ್ಯಾಂಕ್ ಖಾತೆ ಪರಿಶೀಲಿಸಿದ ಸಿಬ್ಬಂದಿಗೆ ಶಾಕ್ ಆಗಿದೆ. ಯಾಕೆಂದರೆ 100 ಕೋಟಿ ರೂ. ಮೊತ್ತದ ಚೆಕ್ ಬರೆದಿರುವ ಉಳಿತಾಯ ಖಾತೆಯಲ್ಲಿ ಕೇವಲ 17 ರೂ. ಇರುವುದು ಕಂಡುಬಂದಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್ :ಈ ಶುಭದಿನ ನೆರವೇರಲಿದೆ ‘ಪಟ್ಟಾಭಿಷೇಕ’

ಆರಂಭದಲ್ಲಿ 100 ಕೋಟಿ ರೂ. ಮೊತ್ತದ ಚೆಕ್ ಕಂಡು ಆಶ್ಚರ್ಯಚಕಿತರಾಗಿದ್ದ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲಿರುವ 17 ರೂ. ನೋಡಿ ಶಾಕ್ ಆಗಿದ್ದಾರೆ. ಇದೀಗ ದೇವಸ್ಥಾನದ ಅಧಿಕಾರಿಗಳು ಚೆಕ್ ಹಾಕಿರುವ ವ್ಯಕ್ತಿಯ ಪತ್ತೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News