ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ನಾಳೆ ಸಂಜೆ 4.30ಕ್ಕೆ ಶಕ್ತಿ ಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ ಬೃಹತ್ ವೇದಿಕೆಯಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂದು ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದ್ದು, ಪ್ರಮಾನವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಶಾಸಕರು ಗೈರಾಗಲಿದ್ದಾರೆ.


COMMERCIAL BREAK
SCROLL TO CONTINUE READING

ಹೆಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ
ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಭರದ ಸಿದ್ದತೆ ನಡೆಯುತ್ತಿದೆ. ವಿಧಾನಸೌಧದ ಬಹು ಮೆಟ್ಟಿಲುಗಳ ಮೇಲೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವೇದಿಕೆ ನಿರ್ಮಾಣದಲ್ಲಿ ಸಿಬ್ಬಂಧಿಗಳು ತೊಡಗಿದ್ದಾರೆ. ವಿವಿಐಪಿಗಳಿಗಾಗಿಯೇ 3000 ವಿಶೇಷ ಆಸನಗಳ ವ್ಯವಸ್ಥೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗಾಗಿ  ಹೈಕೋರ್ಟ್ ಹಾಗೂ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.