ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಳ ಪ್ರತಿಷ್ಠೆಯ ಕಣವಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿಂದು ಇಡೀ ದಿನ ಸ್ಯಾಂಡಲ್ ವುಡ್ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಎಂ ಪರ ಪ್ರಚಾರ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಒಳಪಡುವ ಬಹುತೇಕ ಗ್ರಾಮಗಳಲ್ಲಿ ದರ್ಶನ್ ಇಂದು ಪ್ರಚಾರ ಕೈಗೊಳ್ಳುತ್ತಿದ್ದು, ಎಲ್ಲಾ ಕಡೆ ರೋಡ್ ಶೋ ಮೂಲಕ ಬೆಳಿಗ್ಗೆ 09:00 ಗಂಟೆಯಿಂದ ರಾತ್ರಿ 07:30ರವರೆಗೆ ಸಿದ್ದರಾಮಯ್ಯ ಪರ ಮತಯಾಚನೆ ನಡೆಸಲಿದ್ದಾರೆ. ಶ್ರೀರಾಂಪುರದಲ್ಲಿ ರೋಡ್ ಶೋ ನಡೆಸಿದ ಬಳಿಕ ದರ್ಶನ್ ಪ್ರಚಾರ ಅಂತ್ಯವಾಗಲಿದೆ.


ನಟ ಕಿಚ್ಚ ಸುದೀಪ್ ಸಹ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಮತಬೇಟೆ ನಡೆಸಲು ಸಜ್ಜಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿನ ಅಭಿಮಾನದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಪರ ಪ್ರಚಾರ ಮಾಡುವುದಾಗಿ ಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.