ನವದೆಹಲಿ: ನನಗೆ ರಾಜ್ಯದಲ್ಲಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜೆಡಿಎಸ್ ನ ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು ದೆಹಲಿಯಲ್ಲಿಂದು ತಿಳಿಸಿದರು.


COMMERCIAL BREAK
SCROLL TO CONTINUE READING

ದೆಹಲಿಯಲ್ಲಿಂದು ಲೋಕಸಭೆ ಸ್ಪೀಕರ್ ನಿವಾಸಕ್ಕೆ ತೆರಳಿ ಸಂಸದ ಸಿ.ಎಸ್. ಪುಟ್ಟರಾಜು ರಾಜೀನಾಮೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಶಾಸಕನಾಗಿ ಆಯ್ಕೆಯಾದ 14 ದಿನದಲ್ಲಿ ರಾಜೀನಾಮೆ ಕೊಡಬೇಕಿತ್ತು. ಇಂದು ಲೋಕಸಭೆಯ ಸ್ಪೀಕರ್ ಅವರಿಗೆ ನನ್ನ ರಾಜೀನಾಮೆ ನೀಡಿದ್ದೇನೆ ಎಂದರು. ಅಲ್ಲದೆ ನನಗೆ ರಾಜ್ಯದಲ್ಲಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.