'ಇನ್ನು 24 ದಿನಗಳಲ್ಲಿ ನಾನು ಸಿಎಂ ಆಗಲಿದ್ದೇನೆ': ಬಿ.ಎಸ್. ಯಡಿಯೂರಪ್ಪ

ನನ್ನ ವಿರುದ್ಧ ಸ್ಪರ್ಧಿಸಿರುವ ಅಭ್ಯರ್ಥಿಗಳ ಠೇವಣಿ ಕಳೆಯಿರಿ.

Last Updated : Apr 19, 2018, 05:11 PM IST
'ಇನ್ನು 24 ದಿನಗಳಲ್ಲಿ ನಾನು ಸಿಎಂ ಆಗಲಿದ್ದೇನೆ': ಬಿ.ಎಸ್. ಯಡಿಯೂರಪ್ಪ title=

ಶಿಕಾರಿಪುರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 'ಇನ್ನು 24 ದಿನಗಳಲ್ಲಿ ನಾನು ಸಿಎಂ ಆಗಲಿದ್ದೇನೆ' ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿ ಮಾತನಾಡಿದ ಯಡಿಯೂರಪ್ಪ, ''ಇನ್ನು 24 ದಿನಗಳಲ್ಲಿ ನಾನು ಮುಖ್ಯಮಂತ್ರಿಯಾಗಲಿದ್ದೇನೆ. ನನ್ನ ಮುಂದಿನ ಜೀವನವನ್ನು ರೈತರಿಗೆ ಮುಡಿಪಾಗಿಡುತ್ತೇನೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ನನಗೆ ಮತ ಕೊಡಿಸಿ, ನನ್ನ ವಿರುದ್ಧ ಸ್ಪರ್ಧಿಸಿರುವ ಅಭ್ಯರ್ಥಿಗಳ ಠೇವಣಿ ಕಳೆಯಿರಿ' ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

Trending News