ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ  ರಚನೆಯ ಬಗ್ಗೆ ಕೆಲವು ಊಹಪೋಹಾ ಸುದ್ದಿಗಳು ಹರಿದಾಡುತ್ತಿರುವುದನ್ನು ನಾನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. 'ರಾಜ್ಯದಲ್ಲಿ ರಚನೆ ಆಗಲಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ’ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ದೇವೇಗೌಡರು, 'ಸಮ್ಮಿಶ್ರ ಸರ್ಕಾರದ ಯಾವುದೇ ಪ್ರಮುಖ ನಿರ್ಧಾರಗಳ ಬಗ್ಗೆ ಆಗಲಿ, ಮಂತ್ರಿ ಮಂಡಲದ ರಚನೆಯ ಬಗ್ಗೆ ಆಗಲಿ, ಸಮನ್ವಯ ಸಮಿತಿ ರಚನೆಯ ಬಗ್ಗೆ ಆಗಲಿ ಹಾಗೂ ಸರ್ಕಾರದ ಆಡಳಿತ ವಿಚಾರದಲ್ಲಾಗಲಿ ನಾನು ಬಾಗಿಯೂ ಆಗುವುದಿಲ್ಲ ಅಥವಾ ನನ್ನ ಹಸ್ತಕ್ಷೇಪವು ಇರುವುದಿಲ್ಲ' ಎಂದು ತಿಳಿಸಿದ್ದಾರೆ.