ಬೆಂಗಳೂರು: ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿ.ಎನ್. ವಿಜಯ ಕುಮಾರ್ ಗುರುವಾರ ತಡರಾತ್ರಿ ವಿಧಿವಶರಾದ ಹಿನ್ನೆಲೆಯಲ್ಲಿ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಈ ಸಂಬಂಧ ಇಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಭೇಟಿ ನೀಡಲಿದ್ದಾರೆ. ಜಯನಗರ ಕ್ಷೇತ್ರದ ತಮ್ಮ ಅಭ್ಯರ್ಥಿ ವಿಧಿವಶರಾಗಿದ್ದು, ಬೇರೆ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲು ಸಮಯಾವಕಾಶ ಇಲ್ಲದ ಕಾರಣ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡುವಂತೆ ಮನವಿ ಸಲ್ಲಿಸಲಿದ್ದಾರೆ.


ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ವಿಜಯ್ ಕುಮಾರ್ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದರು. ನಂತರ ಅವರನ್ನು ಕೂಡಲೇ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ, ಗುರುವಾರ ತಡರಾತ್ರಿ 01:00 ಗಂಟೆಗೆ ವಿಧಿವಶರಾದರು ಎಂದು ಜಯದೇವ ಆಸ್ಪತ್ರೆ ನಿರ್ದೇಶಕ  ಡಾ. ಮಂಜುನಾಥ್ ತಿಳಿಸಿದ್ದಾರೆ.