ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ  ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರ ನಾಯಕರ ಹಿಂಡು ಬೆಂಗಳೂರಿಗೆ ಆಗಮಿಸಿಲಿದೆ.


COMMERCIAL BREAK
SCROLL TO CONTINUE READING

ಇದೇ 23ರಂದು ಬುಧುವಾರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಲಿದ್ದು ಈ ಸಮಾರಂಭಕ್ಕೆ ಖುದ್ದಾಗಿ ಕುಮಾರಸ್ವಾಮಿಯವರೇ ರಾಷ್ಟ್ರದ ನಾಯಕರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.


ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ" ನಾನು ನಾಳೆ ಬೆಳಗ್ಗೆ ದೆಹಲಿಗೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧೀ ಯವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ "ಎಂದು ತಿಳಿಸಿದ್ದಾರೆ.ಈ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ,ಮಾಯಾವತಿ, ಚಂದ್ರಬಾಬು ನಾಯ್ಡು ,ಚಂದ್ರಶೇಖರ್ ರಾವ್ ಮತ್ತು ಮಮತಾ ಬ್ಯಾನರ್ಜಿಯವರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.