/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ ಭೇಟೆಯಲ್ಲಿ ತೊಡಗಿರುವ ರಾಜಕೀಯ ಪಕ್ಷಗಳ ನಾಯಕರು ಹಲವು ಭಾಗಗಳಲ್ಲಿ ತಮ್ಮ ಪ್ರವಾಸ ಮುಂದುವರೆಸಿದ್ದಾರೆ. ಈಗಾಗಲೇ ಹಲವು ಬಾರಿ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ, ಇಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ. 

ಇನ್ನು ಇದೇ ವೇಳೆ ರಾಜ್ಯ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಹಾಗೂ ಸ್ವತಃ ಎಐಸಿಸಿ ಅಧ್ಯಕ್ಷರಿಂದ ಕಾಂಗ್ರೆಸ್‌ನ ರಾಜ್ಯ ಪ್ರಣಾಳಿಕೆ  ಇಂದು ಬಿಡುಗಡೆಯಾಗಲಿದೆ. 

ರಾಹುಲ್ ಗಾಂಧಿಯ ಇಂದಿನ ಕಾರ್ಯಕ್ರಮಗಳ ವಿವರ ಇಂತಿದೆ
ಬೆಳಿಗ್ಗೆ 11:00ಗಂಟೆಗೆ ಬಂಟ್ವಾಳದಲ್ಲಿ  ಕಾರ್ನರ್ ಮೀಟಿಂಗ್ ನಲ್ಲಿ ಭಾಗವಹಿಸಲಿರುವ ರಾಹುಲ್, ಮಧ್ಯಾಹ್ನ 01:20ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು,ನಂತರ  ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿದ್ದಾರೆ. ಇದಾದ ಬಳಿಕ ಕೊಡಗಿನ ಗೋಣಿಕೊಪ್ಪಲಿಗೆ ತೆರಳಲಿರುವ ರಾಹುಲ್ ಗಾಂಧಿ, ಅಲ್ಲಿನ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಮೈಸೂರಿನಿಂದ ದೆಹಲಿಗೆ ತೆರಳಲಿದ್ದಾರೆ.

Section: 
English Title: 
Rahul Gandhi will be launching the congress manifesto in Mangaluru today
News Source: 
Home Title: 

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಹುಲ್ ಪ್ರವಾಸ

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಹುಲ್ ಪ್ರವಾಸ
Yes
Is Blog?: 
No
Tags: 
Facebook Instant Article: 
Yes
Mobile Title: 
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಹುಲ್ ಪ್ರವಾಸ