ಬೆಂಗಳೂರು: ಜನಾಶಿರ್ವಾದ ಯಾತ್ರೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹವಾ ರಾಜ್ಯದಲ್ಲಿ ಮತ್ತೆ ಮುಂದುವರಿಯಲಿದೆ. ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿರುವ ರಾಹುಲ್, ಬೀದರ್, ಕಲಬುರ್ಗಿ, ಗದಗ, ಹಾವೇರಿ ಜಿಲ್ಲೆಗಳ ವಿವಿಧೆಡೆ ಭರ್ಜರಿ ಪ್ರಚಾರದಲ್ಲಿ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಗುರುವಾರ ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಬೀದರ್ ಜಿಲ್ಲೆಗೆ ಆಗಮಿಸಲಿರುವ ರಾಹುಲ್ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನದ ವೇಳೆಗೆ ಔರಾದ್ ನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿಂದ ಬಾಲ್ಕಿಗೆ ತೆರಳಲಿದ್ದು ಬಾಲ್ಕಿಪಟ್ಟಣದಲ್ಲಿ ಇಂಜನಿಯರಿಂಗ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಹುಮ್ನಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ನಂತರ ಹುಮ್ನಾಬಾದ್‌ ನಿಂದ ಮನ್ನಾಖೇಳ್ಳಿ ಕಮಠಾಣ ಮೂಲಕ ರೋಡ್ ಶೋ ನಡೆಸಿ ಪ್ರಚಾರ ಮಾಡಲಿದ್ದಾರೆ. ನಾಳೆ ಕಲಬುರ್ಗಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ತಮ್ಮ ಮತಬೇಟೆಯನ್ನು ಮುಂದುವರಿಸಲಿದ್ದಾರೆ.