ಮೈಸೂರು : ಇದುವರೆಗೂ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸ್ಪರ್ಧೆ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿರುವುದಾಗಿ ಖಚಿತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಇಂದು ಸುದ್ದಿಗರಾರೊಂದಿಗೆ ಮಾತನಾಡಿದ ಅವರು, ಉತ್ತರಕರ್ನಾಟಕ ದಿಂದ ಸ್ಪರ್ಧಿಸುವಂತೆ ಸಾಕಷ್ಟು ಒತ್ತಡ ಇತ್ತು. ಅಲ್ಲದೆ, ತಿಮ್ಮಾಪುರ ಮತ್ತು ಎಸ್.ಆರ್.ಪಾಟಿಲ್ ಅವರೂ ಒತ್ತಾಯ ಮಾಡಿದ್ದರು. ಆದರೆ ನಾನು ಸ್ಪರ್ಧೆ ಬಗ್ಗೆ ಯಾವ ಚಿಂತನೆ ನಡೆಸಿರಲಿಲ್ಲ. ಇದೀಗ ಪಕ್ಷದ ಹೈಕಮ್ಯಾಂಡ್ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ಸೂಚನೆ ನೀಡಿದೆ. ಆದ್ದರಿಂದ ಏಪ್ರಿಲ್ 24 ರಂದು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತಪಡಿಸಿದ್ದಾರೆ. 


ಈಗಾಗಲೇ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಸಿದ್ದರಾಮಯ್ಯ ಅವರು, ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಸಾಕಷ್ಟು ಸುದ್ದಿ ಮಾಡಿತ್ತು. ಆದರೆ ಇದೀಗ ಎಲ್ಲರ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.