ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೈವೋಲ್ಟೆಜ್ ಕ್ಷೇತ್ರ ಎಂದೇ ಹೇಳಲಾಗುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯ ಸಾಧಿಸಿದ್ದಾರೆ. ಕೊನೆಯ ಸುತ್ತಿನವರೆಗೂ ಪ್ರಬಲ ಪೈಪೋಟಿ ನೀಡಿದ ಶ್ರೀರಾಮುಲು ವಿರುದ್ಧ 2,500 ಮತಗಳ ಅಂತರದಿಂದ ಸಿದ್ದರಾಮಯ್ಯ ಜಯಭೇರಿ ಬಾರಿಸಿದ್ದಾರೆ. 


COMMERCIAL BREAK
SCROLL TO CONTINUE READING

ಒಟ್ಟು 1,96,673 ಲಕ್ಷ ಮತದಾರರಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ 64,022 ಮತಗಳನ್ನು ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು 60,335, ಜೆಡಿಎಸ್ ಅಭ್ಯರ್ಥಿ ಹನುಮಂತ ಬೇವಿನ ಮರದ 23,067 ಮತಗಳಿಸಿದ್ದಾರೆ. ಆದರೆ, ತಮ್ಮ ತವರು ಜಿಲ್ಲೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ವಿರುದ್ಧ ಸೋಲನುಭವಿಸಿದ್ದಾರೆ.