ಬಾದಾಮಿಯಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬಾದಾಮಿಯ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಂಸದ ಬಿ.ಶ್ರೀರಾಮುಲು ನಾಮಪತ್ರ ಸಲ್ಲಿಸಿದರು. 

Last Updated : Apr 24, 2018, 01:53 PM IST
ಬಾದಾಮಿಯಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ title=

ಬಾದಾಮಿ : ಬಾದಾಮಿಯ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಂಸದ ಬಿ.ಶ್ರೀರಾಮುಲು ನಾಮಪತ್ರ ಸಲ್ಲಿಸಿದರು. 

ಕಾಂಗ್ರೆಸ್ ಅಭ್ಯರ್ಥಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಉಮೇದುವಾರಿಕೆ ಅರ್ಜಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಪ್ರಕಾಶ್ ಜಾವಡೆಕರ್ ಶ್ರಿರಾಮುಲುಗೆ ಸಾಥ್ ನೀಡಿದರು. 

ನಾಮಪತ್ರ ಸಲ್ಲಿಸುವ ಮುನ್ನ ಸುದಿಗರರೊಂದಿಗೆ ಮಾತನಾಡಿದ ಶ್ರೀರಾಮುಲು, ಹೈಕಮ್ಯಾಂಡ್ ತೀರ್ಮಾನದಂತೆ ಬಾದಾಮಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸಿದ್ದಾರೆ ಎಂಬುದು ಇಲ್ಲಿ ಮುಖ್ಯವಲ್ಲ. ಬಿಜೆಪಿ ಗೆಲ್ಲುವುದೊಂದೇ ಮುಖ್ಯ. ಜೊತೆಗೆ ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. 

Trending News