ಸಿದ್ದರಾಮಯ್ಯ ವಿರುದ್ಧ ಬಾದಾಮಿಯಲ್ಲಿ ಶ್ರೀರಾಮುಲು ಸ್ಪರ್ಧೆ ಖಚಿತ

ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರಿರಾಮುಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುವುದು ಖಚಿತವಾಗಿದೆ. 

Last Updated : Apr 23, 2018, 05:56 PM IST
ಸಿದ್ದರಾಮಯ್ಯ ವಿರುದ್ಧ ಬಾದಾಮಿಯಲ್ಲಿ ಶ್ರೀರಾಮುಲು ಸ್ಪರ್ಧೆ ಖಚಿತ title=

ಬೆಂಗಳೂರು : ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರಿರಾಮುಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುವುದು ಖಚಿತವಾಗಿದೆ. 

ಬದಾಮಿಯಲ್ಲಿ ಹಿಂದುಳಿದ ವರ್ಗಗಳ ಮತ ಹೆಚ್ಚಾಗಿರುವುದರಿಂದ ಬಿಜೆಪಿ ಉಪ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ಬಿ.ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ.

ಈ ಬಗ್ಗೆ ಬಿಜೆಪಿ ಉಸ್ತುವಾರಿ ಮುರುಳಿಧರ ರಾವ್ ಬಿಜೆಪಿ ಮುಖಂಡರಿಗೆ ಸಂದೇಶ ನೀಡಿದ್ದು, ನಾಳೆ ನಾಮಪತ್ರ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲು ತಿಳಿಸಿದ್ದಾರೆ ಎನ್ನಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಶ್ರೀರಾಮುಲು ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

Trending News