ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲ, ನಾಲ್ಕು ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲುವು ನಮ್ಮದೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ; ಏ. 24ಕ್ಕೆ ನಾಮಪತ್ರ ಸಲ್ಲಿಕೆ


ಇಲ್ಲಿನ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರದಲ್ಲಿ ನಿರತರಾಗಿರುವ ಕುಮಾರಸ್ವಾಮಿ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದೆ. ಹಾಗಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಬಾದಾಮಿ ಕ್ಷೇತ್ರದಲ್ಲಿ ಬಾದಾಮಿ ಅಲ್ಲ, ಗೋಡಂಬಿ ಸಿಗೋದು ಗ್ಯಾರೆಂಟಿ ಎಂದು ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.


ಸಿಎಂ ತವರು ಕ್ಷೇತ್ರದಲ್ಲಿ ಇಂದು ಕುಮಾರಸ್ವಾಮಿ ಭರ್ಜರಿ ಪ್ರಚಾರ


ಮುಂದುವರೆದು ಮಾತನಾಡಿದ ಅವರು, "ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲ ಅಭ್ಯರ್ಥಿಯಾಗಿ ಜಿ.ಟಿ.ದೇವೇಗೌಡ ಅವರು ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಬಾದಾಮಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹನುಮಂತ ಮಾವಿನಮರದ್ ಸ್ಪರ್ಧಿಸುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ನಾವೂ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಹಾಗಾಗಿ ಸಿದ್ದರಾಮಯ್ಯ ಎರಡಲ್ಲ, ನಾಲ್ಕು ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲುವು ನಮ್ಮದೇ" ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.