ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿಗೆ ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿರುವ  ಬಿಜೆಪಿ ಯಡಿಯೂರಪ್ಪ ತಾವು ಕೊನೆ ಮತ ಎಣಿಕೆಯಾಗುವವರೆಗೂ ಕಾಯುತ್ತೇನೆ ಎಂದು ತಿಳಿಸಿದ್ದಾರೆ.  


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ " ನಾನು ಕೊನೆಯ ಮತದ ಎಣಿಕೆಯಾಗುವವರೆಗೂ ಕಾಯುತ್ತೇನೆ, ಪೂರ್ಣ ಚಿತ್ರಣ ಸಿಕ್ಕ ಬಳಿಕ ಕೇಂದ್ರ ಬಿಜೆಪಿ ನಾಯಕತ್ವ ಮುಂದಿನ ಕಾರ್ಯಯೋಜನೆಯನ್ನು ರೂಪಿಸಲಿದೆ, ಎಂದು ತಿಳಿಸಿದ್ದಾರೆ  


ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದರ ಕುರಿತಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ  ಅದರ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು