ಮೋಜಿನಲ್ಲಿ ತೊಡಗಿದ್ದ ಸಚಿವ ಸುಧಾಕರ್ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿದ್ದಾರೆ: ಡಿಕೆಶಿ
ಡಿ.ಕೆ. ಶಿವಕುಮಾರ್ ಮತ್ತು ಸುಧಾಕರ್ ಮೊದಲಿಂದಲೂ ಎಣ್ಣೆ-ಸೀಗೆಕಾಯಿ ಇದ್ದಂತೆ. ಇಬ್ಬರೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಶಿಷ್ಯರಾಗಿದ್ದರೂ, ಇಬ್ಬರೂ ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೂ ಅವರ ಸಂಬಂಧ ಅಷ್ಟಕ್ಕಷ್ಟೇ. ಡಿ.ಕೆ. ಶಿವಕುಮಾರ್ ಪ್ರತಿನಿಧಿಸು ಕನಕಪುರಕ್ಕೆ ಸ್ಯಾಂಕ್ಷನ್ ಆಗಿದ್ದ ಮೆಡಿಕಲ್ ಕಾಲೇಜನ್ನು ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೊಂಡೊಯ್ದ ಮೇಲೆ ಇವರಿಬ್ಬರ ನಡುವಿನ ಗುದ್ದಾಟ ಇನ್ನಷ್ಟು ಹೆಚ್ಚಾಗಿತ್ತು.