Karnataka Budget 202 : ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್

Karnataka Budget 2024:ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತರಿಗೆ ಭರ್ಜರಿ ಘೋಷಣೆ ನೀಡಿದ್ದಾರೆ. 

Written by - Ranjitha R K | Last Updated : Feb 16, 2024, 11:06 AM IST
  • 15ನೇ ಬಾರಿಗೆ ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿಎಂ
  • ಈ ಬಾರಿಯ ಬಜೆಟ್ ಭಾರೀ ಮಹತ್ವ ಪಡೆದುಕೊಂಡಿದೆ
  • ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್
Karnataka Budget 202 : ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ title=

ಬೆಂಗಳೂರು :Latest news on Karnataka state budget 2024:   ಸಿಎಂ ಸಿದ್ದರಾಮಯ್ಯ  15ನೇ ಬಾರಿಗೆ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಭಾರೀ ಮಹತ್ವ ಪಡೆದುಕೊಂಡಿದೆ. ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತರಿಗೆ ಭರ್ಜರಿ ಘೋಷಣೆ ನೀಡಿದ್ದಾರೆ. 

ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ : 
1. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ೩೯೩ ಕೋಟಿ ಅನುದಾನ
2.೫೦ ಸಂಖ್ಯಾಬಲವುಳ್ಳ ೫೦ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ
3.೧೦೦ ಸಂಖ್ಯಾಬಲವುಳ್ಳ ೧೦೦ ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
4.೧೦೦ ಮೌಲಾನಾ ಆಜಾದ್ ಶಾಲೆ ಆರಂಭ
5.ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ
6.ಅಲ್ಪಸಂಖ್ಯಾತ ಉದ್ಯಮಶೀಲರು ಕೈಗಾರಿಕೆ ಸ್ಥಾಪನೆಗೆ ೧೦ ಕೋಟಿವರೆಗೂ ಸಾಲ( ಶೇ.೬ರಷ್ಟು ಬಡಿ ಸಹಾಯಧನ)
7.ಅಲ್ಪಸಂಖ್ಯಾತ ಮಹಿಳಾ ಸ್ವ- ಸಹಾಯ ಗುಂಪುಗಳಿಗೆ ೧೦ ಕೋಟಿ ಅನುದಾನ
8.ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ ೧೦೦ ಕೋಟಿ ಅನುದಾನ
9.ಮಂಗಳೂರಿನ ಹಜ್  ಭವನ ನಿರ್ಮಾಣಕ್ಕೆ ೧೦ ಕೋಟಿ ಅನುದಾನ
10.ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ೨೦೦ ಕೋಟಿ

ಇದನ್ನೂ ಓದಿ : ಅಯೋಧ್ಯೆ ರಾಮಮಂದಿರ ನಿರ್ಮಾಣ ಸ್ಮರಣಾರ್ಥ ಬೆಳ್ಳಿ ನಾಣ್ಯ ಬಿಡುಗಡೆ : ಖರೀದಿ ಪ್ರಕ್ರಿಯೆ ಹೀಗಿದೆ

ಇನ್ನು ಹೊರ ರಾಜ್ಯಗಳಿಗೆ ಭೇಟಿ ನೀಡುವ ರಾಜ್ಯದ ಹಿಂದೂ ಭಕ್ತರ ಬಗ್ಗೆಯೂ ಸರ್ಕಾರ ಗಮನ ಹರಿಸಿದೆ. 
1. ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಾಣ. 
2.ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ.
3.ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿ
4.ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
5.ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ 3 ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗುವುದು. 158 ಕೋಟಿ ರೂ ವೆಚ್ಚದಲ್ಲಿ
ಕೈಗೆತ್ತಿಕೊಳ್ಳಲಾಗುವುದು

ಇದನ್ನೂ ಓದಿ : Paytm ಫಾಸ್ಟ್ಯಾಗ್ ಬಳಕೆದಾರರಿಗೆ ಬಿಗ್ ಅಪ್ಡೇಟ್ : ರೋಡ್ ಟೋಲಿಂಗ್ ಅಥಾರಿಟಿ ಜಾರಿ ಮಾಡಿದೆ ಹೊಸ ಮಾರ್ಗ ಸೂಚಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News