Atal Pension Yojana : ಮುಂದಿನ ತಿಂಗಳಿನಿಂದ ಅಟಲ್ ಪಿಂಚಣಿ ಯೋಜನೆಯಲ್ಲಿ ಸರ್ಕಾರ ದೊಡ್ಡ ಬದಲಾವಣೆ ತರಲಿದೆ. ಅಕ್ಟೋಬರ್ ತಿಂಗಳಿನಿಂದ ಅನೇಕ ಜನರು ಈ ಯೋಜನೆಯ ಲಾಭವನ್ನು ಪಡೆಯುವುದು ಸಾಧ್ಯವಾಗುವುದಿಲ್ಲ. ಅಂದರೆ ಈಗ ದೇಶದ  ಪ್ರತಿಯೊಬ್ಬರೂ ಈ ಯೋಜನೆಯ ಪ್ರಯೋಜನವನ್ನು ಪಡೆಯುವುಡು ಸಾಧ್ಯವಿಲ್ಲ. 


COMMERCIAL BREAK
SCROLL TO CONTINUE READING

ಅಕ್ಟೋಬರ್ ನಿಂದ ಬದಲಾದ ನಿಯಮ ಜಾರಿಗೆ : 
ಅಟಲ್ ಪಿಂಚಣಿ ಯೋಜನೆಯ ಹೊಸ ನಿಯಮಗಳ ಅಡಿಯಲ್ಲಿ, ಆದಾಯ ತೆರಿಗೆ ಪಾವತಿಸುವವರು ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಸರ್ಕಾರಿ ಯೋಜನೆಯ ಹೊಸ ನಿಯಮವು ಅಕ್ಟೋಬರ್ 2022 ರಿಂದ ಜಾರಿಗೆ ಬರಲಿದೆ. 


ಇದನ್ನೂ ಓದಿ : Kisan Credit Card: ಮನೆಯಲ್ಲಿಯೇ ಕುಳಿತು ಎಸ್‌ಬಿಐ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಸುಲಭ ಪ್ರಕ್ರಿಯೆ


ತೆರಿಗೆದಾರರು ಸೆಪ್ಟೆಂಬರ್ 30 ರವರೆಗೆ ಪ್ರಯೋಜನಗಳನ್ನು ಪಡೆಯಬಹುದು :
ತೆರಿಗೆದಾರರು, ಸರ್ಕಾರದ ಈ ಯೋಜನೆಯ ಲಾಭವನ್ನು ಸೆಪ್ಟೆಂಬರ್ ತಿಂಗಳವರೆಗೆ ಮಾತ್ರ ಪಡೆಯಬಹುದಾಗಿದೆ. ಮುಂದಿನ ತಿಂಗಳಿನಿಂದ ಇದರ ಲಾಭ ಪಡೆಯಲು ಸಾಧ್ಯವಿಲ್ಲ. ತೆರಿಗೆದಾರರು ಈ ಯೋಜನೆಯ ಲಾಭವನ್ನು ಸೆಪ್ಟೆಂಬರ್ 30 ರವರೆಗೆ ಪಡೆಯಬಹುದು. 


ಈಗಾಗಲೇ ತೆರೆದಿರುವ ಖಾತೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ : 
ಈಗಾಗಲೇ ಖಾತೆಯನ್ನು ತೆರೆದಿರುವವರು ಈ ಯೋಜನೆಯ ಲಾಭವನ್ನು ಪಡೆಯುವುದನ್ನು ಮುಂದುವರಿಸುತ್ತಾರೆ. ಒಂದು ವೇಳೆ ಆದಾಯ ತೆರಿಗೆ ಪಾವತಿದಾರ ಅಕ್ಟೋಬರ್ 1 ರ ನಂತರ ಅಟಲ್ ಪಿಂಚಣಿ ಯೋಜನೆ ಖಾತೆಯನ್ನು ತೆರೆದರೆ  ಆ ಖಾತೆಯನ್ನು ಮುಚ್ಚಲಾಗುತ್ತದೆ.


ಇದನ್ನೂ ಓದಿ : ದೇಶದ ಈ ಪ್ರದೇಶಗಳಲ್ಲಿ SBI- Bank of Baroda ದ 300 ಹೊಸ ಶಾಖೆ ಓಪನ್


ಈ ಯೋಜನೆಯನ್ನು  2015-16 ರ ಆರ್ಥಿಕ ವರ್ಷದಲ್ಲಿ ಪ್ರಾರಂಭಿಸಲಾಯಿತು.  ಈಗಾಲೇ  ಈ ಯೋಜನೆಯ ಪ್ರಯೋಜನವನ್ನು 4 ಕೋಟಿ ಜನರು ಪಡೆದುಕೊಂಡಿದ್ದಾರೆ. ಈ ಯೋಜನೆಯನ್ನು ವಿಶೇಷವಾಗಿ ಯಾವುದೇ ಸರ್ಕಾರಿ ಪಿಂಚಣಿಯ ಲಾಭ ಪಡೆಯಲು ಸಾಧ್ಯವಾಗದ ಜನರಿಗಾಗಿ ಪ್ರಾರಂಭಿಸಲಾಗಿದೆ. ಆರಂಭವಾದ ಕೇವಲ 6 ವರ್ಷಗಳಲ್ಲಿ ಈ ಯೋಜನೆಯು ಸುಮಾರು 4 ಕೋಟಿ ಜನರಿಗೆ ಪ್ರಯೋಜನವನ್ನು ನೀಡಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.