BPL, Antyodaya Anna Yojana Latest Update: ನಕಲಿ ದಾಖಲೆಗಳನ್ನು ನೀಡಿ ಆಕ್ರಮವಾಗಿ ಬಿ‌ಪಿ‌ಎಲ್ ಕಾರ್ಡ್ ಪಡೆದಿರುವವರ ವಿರುದ್ಧ ಸಮರ ಸಾರಿರುವ ಕರ್ನಾಟಕ ಸರ್ಕಾರ ಇದೀಗ ಬಿ‌ಪಿ‌ಎಲ್, ಅಂತ್ಯೋದಯ ಕಾರ್ಡ್ ಅನ್ನ ಯೋಜನೆಯಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದು, ಅಕ್ಕಿ ಹಣಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ. 


COMMERCIAL BREAK
SCROLL TO CONTINUE READING

ಬಿ‌ಪಿ‌ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊದಿರುವವರಿಗೆ ಆಹಾರ ನೀಡುವ ನಿಯಮದಲ್ಲಿ ಬದಲಾವಣೆ ಮಾಡಲು ಹೊರಟಿರುವ ಸರ್ಕಾರ ಪಡಿತರದಾರರಿಗೆ ನೇರ ನಗದು ಪಾವತಿಯನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. 


ಇದನ್ನೂ ಓದಿ- ನಕಲಿ ದಾಖಲೆ ತೋರಿಸಿ ಬಿಪಿಎಲ್ ಕಾರ್ಡ್ ಪಡೆದು ಶಾಕ್‌ನಲ್ಲಿದ್ದವರಿಗೆ ಗುಡ್ ನ್ಯೂಸ್..!


ಹೌದು, ಬಿ‌ಪಿ‌ಎಲ್ ಮತ್ತು ಅಂತ್ಯೋದಯ ಕಾರ್ಡ್'ದಾರರಿಗೆ ಆಹಾರ ನೀಡುವ ನಿಯಮದಲ್ಲಿ ಮಹತ್ವದ ಬದಲಾವಣೆಗೆ ಸಜ್ಜಾಗಿರುವ ಸರ್ಕಾರ ಇನ್ಮುಂದೆ ನೇರ ನಗದು ಪಾವತಿ ಬದಲಿಗೆ ಆಹಾರ ಕಿಟ್ ವಿತರಿಸುವ ಬಗ್ಗೆ ಚಿಂತನೆ ನಡೆಸಿದೆ. 


ಇದನ್ನೂ ಓದಿ- Home Loan EMI ಬೌನ್ಸ್ ಆಗಿದ್ಯಾ? ಭಯಬೇಡ... ಕೂಡಲೇ ಈ ಕೆಲಸ ಮಾಡಿ...


ಆದಾಗ್ಯೂ, ಈ ಬಗ್ಗೆ ಸರ್ಕಾರದಿಂದ ಇನ್ನೂ ಸಹ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಅಕ್ಟೋಬರ್ 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ, ಬಿ‌ಪಿ‌ಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆಯಲ್ಲಿ ನೇರ ನಗದು ಪಾವತಿ ಬದಲಿಗೆ ಫುಡ್ ಕಿಟ್ ವಿತರಿಸುವ ಗಂಭೀರ ಚಿಂತನೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.