BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

Written by - Ranjitha R K | Last Updated : Oct 5, 2023, 09:10 AM IST
  • ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್
  • ತಿದ್ದುಪಡಿಗೆ ಅವಕಾಶ ನೀಡಿ ಆಹಾರ ಇಲಾಖೆ ಆದೇಶ
  • ಅಕ್ಟೋಬರ್ 13 ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ
BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ :  ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ   title=

ಬೆಂಗಳೂರು : ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ. ಇಂದಿನಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ   ಅವಕಾಶ ನೀಡಲಾಗಿದೆ . ಅಂದರೆ ಇಂದಿನಿಂದ ಅಕ್ಟೋಬರ್ 13 ರವರೆಗೆ ಪಡಿತರಾ ಚೀಟಿಯಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.   

ಅ.5ರಿಂದ 13ರವರೆಗಗೂ ತಿದ್ದುಪಡಿಗೆ ಅವಕಾಶ : 
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ರೇಶನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ವಿಭಾಗವಾರುಗಳಂತೆ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೆ  ತಲಾ ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ  ಮಾಡಿ ಕೊಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಏಳು ತಿಂಗಳಲ್ಲಿ ಕನಿಷ್ಠ ದರಕ್ಕೆ ಇಳಿದ ಚಿನ್ನ! ಇನ್ನು ಮೈ ತುಂಬಾ ಹಾಕಬಹುದು ಬಂಗಾರ

ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅವಕಾಶ :
ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಗಸ್ಟ್ 5ರಿಂದ 7ರವರೆಗೂ ಇಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ವಿಶೇಷ ಎಂದರೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ  ಕಲ್ಪಿಸಲಾಗಿದೆ. 

ರೇಶನ್ ಕಾರ್ಡ್ ಎಲ್ಲಿ ತಿದ್ದುಪಡಿ ಮಾಡಿಸಬಹುದು ? : 
ಕಳೆದ ತಿಂಗಳು ಕೂಡಾ ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಡೌನ್ ಆಗಿ‌ ಸಾರ್ವಜನಿಕರಿಗೆ ಈ ಅವಕಾಶವನ್ನು ಬಳಸಿಕೊಳ್ಳುವುದು ಸಾಧ್ಯವಾಗಿರಲಿಲ್ಲ. ತಿದ್ದುಪಡಿ ಮಾಡಿಸಲು ಬಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಸರ್ಕಾರ ಈ ಅವಕಾಶ ನೀಡಿದೆ. ಸೇವಾ ಕೇಂದ್ರದಲ್ಲಿ‌ ಮಾತ್ರ ಈ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಕಂಪ್ಯೂಟರ್ ಅವಶ್ಯವಾಗಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ‌ ತಿದ್ದುಪಡಿ ಮಾಡಿಸಬಹುದಾಗಿದೆ.

ಇದನ್ನೂ ಓದಿ : ಪ್ಯಾಕೇಜ್‌ನಲ್ಲಿ ಮಾಲ್ಡೀವ್ಸ್‌ನಂತಹ ಸುಂದರ ತಾಣಕ್ಕೆ ಅಗ್ಗದ ಪ್ಯಾಕೇಜ್ ಘೋಷಿಸಿದ ಐ‌ಆರ್‌ಸಿ‌ಟಿ‌ಸಿ

 ಏನೇನು ತಿದ್ದುಪಡಿ ಮಾಡಬಹುದು? : 
1. ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ
2.  ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ 
3. ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
4. ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.

ರಾಜ್ಯದ ಎಲ್ಲಾ ಭಾಗದಲ್ಲಿ ಅವಕಾಶ :
ವಿಭಾಗವಾರುವಿನಂತೆ ತಲಾ ಮೂರು ದಿನಗಳ ಕಾಲ, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. 
1. ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ - ಅ. 5ರಿಂದ 7ರವರೆಗೆ 
2. ಕಲಬುರಗಿ ವಲಯ - ಅ.8ರಿಂದ 10ವರೆಗೆ
3.ಬೆಳಗಾವಿ ವಲಯ - ಅ.11ರಿಂದ 13ರವರೆಗೆ ಅವಕಾಶ 

ಇದನ್ನೂ ಓದಿ : Tata Harrier and Safari: ಹೊಸ ಟಾಟಾ ಹ್ಯಾರಿಯರ್ & ಸಫಾರಿ ಬುಕ್ಕಿಂಗ್ ಈ ದಿನ ಪ್ರಾರಂಭವಾಗಲಿದೆ..!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News