ಶಿಕ್ಷಣದಿಂದ ಕಲ್ಯಾಣದವರೆಗೆ ಕೇಂದ್ರ ಸರ್ಕಾರ ತಂದಿದೆ ಈ ಯೋಜನೆ : ಹೆಣ್ಣು ಹೆತ್ತವರಿನ್ನು ನಿರಾಳ

  ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ  ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಈ ಐದು ಅತ್ಯುತ್ತಮ ಯೋಜನೆಗಳನ್ನು  ಜಾರಿಗೆ ತಂದಿದೆ. 

Written by - Ranjitha R K | Last Updated : Oct 7, 2025, 07:11 PM IST
  • ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಯೋಜನೆಗಳು
  • ಮಹಿಳೆಯರ ಅಭಿವೃದ್ದಿಗಾಗಿ ನಾನಾ ಯೋಜನೆ
  • ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಯೋಜನೆ
ಶಿಕ್ಷಣದಿಂದ ಕಲ್ಯಾಣದವರೆಗೆ ಕೇಂದ್ರ ಸರ್ಕಾರ ತಂದಿದೆ ಈ ಯೋಜನೆ : ಹೆಣ್ಣು ಹೆತ್ತವರಿನ್ನು ನಿರಾಳ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಮಹಿಳೆಯರ ಅಭಿವೃದ್ದಿಗಾಗಿ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಯೋಜನೆಗಳ ಉದ್ದೇಶವು ದೇಶದ ಮಹಿಳೆಯರನ್ನು ಸ್ವ ಉದ್ಯೋಗಕ್ಕಾಗಿ ಉತ್ತೇಜಿಸುವುದು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು. 

Add Zee News as a Preferred Source

ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಯೋಜನೆಗಳು  :
ಉಚಿತ ಹೊಲಿಗೆ ಯಂತ್ರ ಯೋಜನೆ : 

ದೇಶದಲ್ಲಿ ಹೆಚ್ಚಿನ ಜನಸಂಖ್ಯೆಯು ಬಡ ಮತ್ತು ಕಾರ್ಮಿಕ ಮಹಿಳೆಯರನ್ನು ಒಳಗೊಂಡಿದೆ. ಈ ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆಯರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ಬಡ ಮತ್ತು ಕೂಲಿ ಕಾರ್ಮಿಕರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ : ಪಿಂಚಣಿದಾರರಿಗೆ ಸರ್ಕಾರದ ಮಹತ್ವದ ಆದೇಶ : ಈ ಕೆಲಸ ಮಾಡದೇ ಹೋದಲ್ಲಿ ಪೆನ್ಶನ್ ಮೇಲಾಗುವುದು ನೇರ ಪರಿಣಾಮ

ಸುಕನ್ಯಾ ಸಮೃದ್ಧಿ ಯೋಜನೆ : 
ಇದೊಂದು ಸಣ್ಣ ಉಳಿತಾಯ ಯೋಜನೆ.ಹೆಣ್ಣು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆಯಲು, ಹೆಣ್ಣು ಮಗುವಿಗೆ 10 ವರ್ಷ ವಯಸ್ಸಾಗುವ ಮೊದಲು ಅವರ ಹೆಸರಿನಲ್ಲಿ ಖಾತೆಯನ್ನು ತೆರೆಯಬೇಕಾಗುತ್ತದೆ.ಈ ಯೋಜನೆಯಲ್ಲಿ ಕನಿಷ್ಟ  250 ರೂಪಾಯಿ ಹೂಡಿಕೆ ಮಾಡಬೇಕಾಗುತ್ತದೆ. ಇನ್ನು ಈ ಯೋಜನೆಯಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದು.

ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ : 
ಈ ಯೋಜನೆಯನ್ನು ಭಾರತ ಸರ್ಕಾರವು 2015 ರಲ್ಲಿ ಪ್ರಾರಂಭಿಸಿತು. ಹೆಣ್ಣು ಲಿಂಗ ಅನುಪಾತದಲ್ಲಿನ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಮತ್ತು ದೇಶದಲ್ಲಿ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಉದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು. ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಹಾಯ ಮಾಡುತ್ತಿದೆ.

ಇದನ್ನೂ ಓದಿ : ರೈತರಿಗೂ ಸಿಕ್ಕಿತು ದೀಪಾವಳಿ ಗಿಫ್ಟ್ : ಖಾತೆಗೆ ಬಿತ್ತು ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ

ಮಹಿಳಾ ಶಕ್ತಿ ಕೇಂದ್ರ ಯೋಜನೆ : 
ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು 2017 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ದೇಶಾದ್ಯಂತ ಸಾಮಾಜಿಕ ಸಹಭಾಗಿತ್ವದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಕೆಲಸ ಮಾಡಲಾಗುತ್ತಿದೆ.

ಪ್ರಧಾನಮಂತ್ರಿ ಉಜ್ವಲಾ ಯೋಜನೆ :
ದೇಶದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳಿಲ್ಲದ ಮನೆಯಿದೆ. ಈ ಭಾಗದಲ್ಲಿ ಮಹಿಳೆಯರು ಅಡುಗೆಗೆ ಸೌದೆ, ಭರಣಿ, ಇತರ ವಸ್ತುಗಳನ್ನು ಬಳಸುತ್ತಾರೆ.  ಹೀಗೆ ಅಡುಗೆ ಮಾಡುವಾಗ ಅಡುಗೆಮನೆಯಲ್ಲಿ ಸಾಕಷ್ಟು ಹೊಗೆ ಏಳುತ್ತದೆ. ಇದರಿಂದ  ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಕೂಡಾ ಎದುರಿಸಬೇಕಾಗುತ್ತದೆ.   ಮಹಿಳೆಯರ ಈ ಸಮಸ್ಯೆಯನ್ನು ಪರಿಗಣಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಆರಂಭಿಸಿದೆ. 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News