ಬೆಂಗಳೂರು :  ಪಡಿತರ ಚೀಟಿ ಹೊಂದಿರುವವರಿಗೆ ಗುಡ್ ನ್ಯೂಸ್ ಇದೆ. ರೇಷನ್‌ ಕಾರ್ಡ್‌ ತಿದ್ದುಪಡಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಮೂಲಕ ಪಡಿತರ ಚೀಟಿದಾರರು ತಮ್ಮ ದಾಖಲೆಯನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ರೇಶನ್ ಕಾರ್ಡ್ ತಿದ್ದುಪಡಿಗೆ ಅವಕಾಶ : 
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದಪಡಿಗೆ ಅವಕಾಶ ನೀಡುವಂತೆ  ಸಾರ್ವಜನಿಕರಿಂದ ಮನವಿ ಕೇಳಿ ಬಂದಿತ್ತು. ಈ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ರೇಶನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆಅವಕಾಶ ಕಲ್ಪಿಸಲಾಗಿದೆ. 


ಇದನ್ನೂ ಓದಿ : 18 ತಿಂಗಳ ಬಾಕಿ ಡಿಎ ಬಗ್ಗೆ ಹೊರ ಬಿತ್ತು ಮಾಹಿತಿ ! ಸರ್ಕಾರಿ ನೌಕರರಿಗೆ ಈ ದಿನ ರಿಲೀಸ್ ಆಗಲಿದೆ ಹಣ


ಹಂತ-ಹಂತವಾಗಿ ತಿದ್ದುಪಡಿಗೆ ಅವಕಾಶ : 
ಇನ್ನು ಸರ್ವರ್‌ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆ ಈ ಬಾರಿ ಹಂತ-ಹಂತವಾಗಿ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಎರಡು ಬಾರಿ ರೇಶನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದಾಗಲೂ ಸರ್ವರ್ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ  ಹಂತ ಹಂತವಾಗಿ ಅವಕಾಶ ಕಲ್ಪಿಸಲಾಗಿದೆ. 


ಎಲ್ಲಿ  ಮಾಡಿಸಬಹುದು ತಿದ್ದುಪಡಿ ? : 
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು. 


ಏನೇನು ತಿದ್ದುಪಡಿ ಮಾಡಬಹುದು ? :
-ಫಲಾನುಭವಿ ಹೆಸರು ಬದಲಾವಣೆ
- ಪಡಿತರ ಕೇಂದ್ರ ಬದಲಾವಣೆ
- ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು 
- ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬಹುದಾಗಿದೆ


ಮಹಿಳೆಯನ್ನು ಮನೆಯ ಯಜಮಾನಿ ಎಂದು ಹೆಸರು ಬದಲಾವಣೆ ಮಾಡಲು ಬಯಸುವವರು ಈ ಸಂದರ್ಭದಲ್ಲಿ ಮಾಡಿಕೊಳ್ಳಬಹುದಾಗಿದೆ. 


ಇದನ್ನೂ ಓದಿ : ಸ್ವಿಗ್ಗಿ, ಜೊಮಾಟೋಗಿಂತ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತೆ ONDC: ಕಾರಣವೇನು ಗೊತ್ತಾ?


ಪಡಿತರ ವಿತರಕರ ಬೇಡಿಕೆ : 
ಈ ಮಧ್ಯೆ, ಕಮಿಷನ್ ಹಣಕ್ಕೆ ಆಗ್ರಹಿಸಿ ನವೆಂಬರ್ 7ರ ವರೆಗೂ  ಪಡಿತರ ವಿತರಿಸದಿರಲು ಪಡಿತರ ವಿತರಕರೂ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಡಿತರ ಅಂಗಡಿ ಬಂದ್ ಮಾಡಲು ತೀರ್ಮಾನಿಸಲಾಗಿದೆ.  
ಪಡಿತರ ವಿತರಕರಿಂದ‌ ನವೆಂಬರ್ 7ರಂದು ಫ್ರೀಡಂ ಪಾರ್ಕ್‌ನಲ್ಲಿ  ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್ ಸಭೆಯಲ್ಲಿ ತಿರ್ಮಾನದಂತೆ  ಪ್ರತಿಭಟನೆ  ನಡೆಯಲಿದೆ. 


ಬೇಡಿಕೆಗಳು ಏನು? :
-ಇ ಕೆ ವೈ ಸಿ ಕೆಲಸ ನಿರ್ವಹಿಸಿದ 23.75 ಕೋಟಿ ಸಹಾಯಧನ ಕೂಡಲೇ ಬಿಡುಗಡೆ ಮಾಡುವುದು
-ಗೋವಾ ಕೇರಳ ಮಹಾರಾಷ್ಟ ರಾಜ್ಯದಲ್ಲಿ ಕೊಡುತ್ತಿರುವ ಕಮಿಷನ್ ಹಾಗೆ ಕರ್ನಾಟಕದಲ್ಲೂ ಕಮಿಷನ್  ಕೊಡಬೇಕು
-ಕ್ವಿಂಟಲ್ ಗೆ 250 ರೂ. ಯಂತೆ ಕಮಿಷನ್ ಜಾರಿಗೆ ಸರ್ಕಾರ ಆದೇಶ ಹೊರಡಿಸಬೇಕು
-ಮಾಲೀಕರು ಮೃತಪಟ್ಟರೆ ಅವರ ಕುಟುಂಬಕ್ಕೆ ನೆರವು ನೀಡಬೇಕು
-ಸರ್ವರ್ ಸಮಸ್ಯೆ ಇರುವುದರಿಂದ ಪ್ರತಿ ಜಿಲ್ಲೆಗೂ ಪ್ರತ್ಯೇಕ ಸರ್ವರ್ ಸೆಂಟರ್ ಕಲ್ಪಿಸಬೇಕು
-ಐದು ಕೆ. ಜಿ ಅಕ್ಕಿ ಹಣವನ್ನು DBT ಮಾಡುವ ಬದಲು ಬೇರೆ ಆಹಾರ ಪದಾರ್ಥಗಳನ್ನು ನೀಡಬೇಕು
-DBT ಮೂಲಕವೇ ಕಮಿಷನ್ ಹಣವನ್ನು ಪಡಿತರ ವಿತರಕರಿಗೆ ನೀಡಬೇಕು.


ಇದನ್ನೂ ಓದಿ : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರದ ಬೆಲೆ ! ಚಿನ್ನ ಖರೀದಿಸಲು ಸೂಕ್ತ ಸಮಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.