ನವದೆಹಲಿ: Higher Retirement Age - ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಸಂತಸದ ಸುದ್ದಿ ಪ್ರಕಟಿಸಲಿದೆ.  ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿಯ ವತಿಯಿಂದ ಈ ಕುರಿತಾದ ಪ್ರಸ್ತಾವನೆಯನ್ನು ಸಾರ್ವತ್ರಿಕೆ ಪಿಂಚಣಿ ವ್ಯವಸ್ಥೆ (Universal Pension System) ಗೆ ಕಳುಹಿಸಲಾಗಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನೂ ಆರಂಭಿಸಬೇಕು ಎಂದು ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿ ಸಲಹೆ ನೀಡಿದೆ.


COMMERCIAL BREAK
SCROLL TO CONTINUE READING

ಹಿರಿಯ ನಾಗರಿಕರ ಸುರಕ್ಷತೆ
ಸಮಿತಿ ನೀಡಿರುವ ವರದಿಯ ಪ್ರಕಾರ, ಈ ವ್ಯವಸ್ಥೆಯ ಅಡಿಯಲ್ಲಿ, ಪ್ರತಿ ತಿಂಗಳು ನೌಕರರಿಗೆ ಕನಿಷ್ಠ 2000 ರೂ ಪಿಂಚಣಿ ನೀಡಬೇಕು ಎನ್ನಲಾಗಿದೆ. ಆರ್ಥಿಕ ಸಲಹಾ ಸಮಿತಿಯು ದೇಶದ ಹಿರಿಯ ನಾಗರಿಕರ ಸುರಕ್ಷತೆಗಾಗಿ ಉತ್ತಮ ವ್ಯವಸ್ಥೆಗಳನ್ನು (Boost Income Security) ಶಿಫಾರಸು ಮಾಡಿದೆ ಎಂಬುದು ಇಲ್ಲಿ ಗಮನಾರ್ಹ.


ಕೌಶಲ್ಯ ಅಭಿವೃದ್ಧಿ ಅತ್ಯಗತ್ಯ
ದುಡಿಯುವ ವಯಸ್ಸಿನ ಜನಸಂಖ್ಯೆ ಹೆಚ್ಚಾಗಬೇಕಾದರೆ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಅನಿವಾರ್ಯತೆ ಇದೆ ಎಂದು ವರದಿ ಹೇಳಿದೆ. ಸಾಮಾಜಿಕ ಭದ್ರತಾ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಇದನ್ನು ಮಾಡಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ವರದಿಯು 50 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿಯ ಬಗ್ಗೆಯೂ ಮಾತನಾಡಿದೆ.


ಇದನ್ನೂ ಓದಿ-Maruti Suzuki Offers: ಮಾರುತಿಯ ಕಾರುಗಳ ಮೇಲೆ ಭಾರೀ ರಿಯಾಯಿತಿ


ನೀತಿ ರೂಪಿಸಲಿರುವ ಸರ್ಕಾರಗಳು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂತಹ ನೀತಿಗಳನ್ನು ರೂಪಿಸಿ ಕೌಶಲ್ಯಾಭಿವೃದ್ಧಿ ಮಾಡುವಂತೆ ವರದಿಯಲ್ಲಿ ತಿಳಿಸಲಾಗಿದೆ. ಈ ಪ್ರಯತ್ನವು ಅಸಂಘಟಿತ ವಲಯದಲ್ಲಿ ವಾಸಿಸುವವರನ್ನು, ದೂರದ ಪ್ರದೇಶಗಳಲ್ಲಿ, ನಿರಾಶ್ರಿತರು, ತರಬೇತಿ ಪಡೆಯಲು ದಾರಿಯಿಲ್ಲದ ವಲಸಿಗರನ್ನು ಒಳಗೊಂಡಿರಬೇಕು, ಆದರೆ ಅವರಿಗೆ ತರಬೇತಿ ನೀಡಬೇಕು.


ಇದನ್ನೂ ಓದಿ-ಈ ಗ್ರಾಹಕರು ಇನ್ನು ಮುಂದೆ ಹೊಸ ಸಿಮ್ ಖರೀದಿಸಲು ಸಾಧ್ಯವಾಗುವುದಿಲ್ಲ..! ಕಾರಣ ಇಲ್ಲಿದೆ


ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟಸ್ 2019 ವರದಿ
ವಿಶ್ವ ಜನಸಂಖ್ಯೆಯ ಪ್ರಾಸ್ಪೆಕ್ಟಸ್ 2019 ರ ಪ್ರಕಾರ, 2050 ರ ವೇಳೆಗೆ ಭಾರತದಲ್ಲಿ ಸುಮಾರು 32 ಕೋಟಿ ಹಿರಿಯ ನಾಗರಿಕರು ಇರಲಿದ್ದಾರೆ ಎನ್ನಲಾಗಿದೆ.  ಅಂದರೆ, ದೇಶದ ಜನಸಂಖ್ಯೆಯ ಸುಮಾರು ಶೇ. 19.5 ರಷ್ಟು ಜನರು ನಿವೃತ್ತರ ವರ್ಗಕ್ಕೆ ಸೇರಲಿದ್ದಾರೆ. 2019 ರಲ್ಲಿ, ಭಾರತದ ಜನಸಂಖ್ಯೆಯ ಸುಮಾರು ಶೇ.10  ಅಥವಾ ಕೋಟಿ ಜನರು ಹಿರಿಯ ನಾಗರಿಕರ ವರ್ಗದಲ್ಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ-Indian Railways Rule: ಬರ್ತ್ ಬಗ್ಗೆ ಹೊಸ ನಿಯಮಗಳನ್ನು ರೂಪಿಸಿದ ಭಾರತೀಯ ರೈಲ್ವೆ ! ಪ್ರಯಾಣಿಸುವ ಮುನ್ನ ತಿಳಿದಿರಲಿ ಹೊಸ ರೂಲ್ಸ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.