Free Ration: ಕೋಟ್ಯಾಂತರ ಜನರಿಗೆ ಸಿಹಿ ಸುದ್ದಿ: ಮುಂದಿನ 6 ತಿಂಗಳವರೆಗೆ ಉಚಿತ ಪಡಿತರ ಲಭ್ಯ!

ಸೋಮವಾರ ಮಾಹಿತಿ ನೀಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ಉಚಿತ ಪಡಿತರ ಯೋಜನೆಯನ್ನು ಸೆಪ್ಟೆಂಬರ್ 30 ರ ನಂತರ ವಿಸ್ತರಿಸಲು ಸರ್ಕಾರ ಯೋಜಿಸುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಆದರೆ, ಈ ಬಗ್ಗೆ ಯಾವಾಗ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಇಲ್ಲ.

Written by - Bhavishya Shetty | Last Updated : Sep 23, 2022, 07:25 PM IST
    • ಮುಂದಿನ 6 ತಿಂಗಳವರೆಗೆ ಉಚಿತ ಪಡಿತರ ಪ್ರಯೋಜನವನ್ನು ಸರ್ಕಾರ ನೀಡಬಹುದು
    • ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸೆಪ್ಟೆಂಬರ್ 30 ರಿಂದ ವಿಸ್ತರಿಸಲು ನಿರ್ಧಾರ!
    • ಪ್ರಸ್ತುತ ಸರ್ಕಾರವು ಬಡವರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತಿದೆ
Free Ration: ಕೋಟ್ಯಾಂತರ ಜನರಿಗೆ ಸಿಹಿ ಸುದ್ದಿ: ಮುಂದಿನ 6 ತಿಂಗಳವರೆಗೆ ಉಚಿತ ಪಡಿತರ ಲಭ್ಯ!  title=
Ration Card

ಕೇಂದ್ರ ಸರ್ಕಾರ ಸದ್ಯದಲ್ಲೇ ಜನ ಸಾಮಾನ್ಯರಿಗೆ ಭರ್ಜರಿ ಗಿಫ್ಟ್ ನೀಡಲು ಹೊರಟಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ (PMGKAY) ಫಲಾನುಭವಿಗಳಿಗೆ ಮುಂದಿನ 6 ತಿಂಗಳವರೆಗೆ ಉಚಿತ ಪಡಿತರ ಪ್ರಯೋಜನವನ್ನು ಸರ್ಕಾರ ನೀಡಬಹುದು, ಅಂದರೆ, ಉಚಿತ ಪಡಿತರ ಸೌಲಭ್ಯವನ್ನು ಮುಂಬರುವ 6 ತಿಂಗಳವರೆಗೆ ವಿಸ್ತರಿಸಬಹುದು. ಉಚಿತ ಪಡಿತರವನ್ನು ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸೆಪ್ಟೆಂಬರ್ 30 ರಿಂದ ವಿಸ್ತರಿಸಲು ಸರ್ಕಾರ ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ. 

ಇದನ್ನೂ ಓದಿ: ಮತ್ತೆ ಬಡ್ಡಿ ದರ ಏರಿಕೆ ಮಾಡಲಿದೆ RBI : ದುಬಾರಿಯಾಗಲಿದೆ ಸಾಲ ಮತ್ತು EMI

ಮಾಧ್ಯಮ ವರದಿಗಳ ಪ್ರಕಾರ, ಪ್ರಸ್ತುತ ಸರ್ಕಾರವು ಬಡವರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತಿದೆ ಮತ್ತು ಸರ್ಕಾರವು ಅದನ್ನು ಮುಂದಿನ 3 ರಿಂದ 6 ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ಈ ಯೋಜನೆಯು ಸರ್ಕಾರಕ್ಕೆ 10 ಶತಕೋಟಿ ಡಾಲರ್ ನಷ್ಟು ಹೆಚ್ಚಿನ ಹಣವನ್ನು ವೆಚ್ಚ ಮಾಡುತ್ತದೆ.

ಸೋಮವಾರ ಮಾಹಿತಿ ನೀಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ಉಚಿತ ಪಡಿತರ ಯೋಜನೆಯನ್ನು ಸೆಪ್ಟೆಂಬರ್ 30 ರ ನಂತರ ವಿಸ್ತರಿಸಲು ಸರ್ಕಾರ ಯೋಜಿಸುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಆದರೆ, ಈ ಬಗ್ಗೆ ಯಾವಾಗ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಇಲ್ಲ.

ಇದನ್ನೂ ಓದಿ: PF ಮೇಲಿನ ಬಡ್ಡಿ ದರ ಹೆಚ್ಚಿಸಲು ಮುಂದಾದ ಸರ್ಕಾರ! ಮಹತ್ವದ ಮಾಹಿತಿ ನೀಡಿದ ಕೇಂದ್ರ ಸಚಿವ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ, ಉಚಿತ ಪಡಿತರ ನೀಡುವ ಅಭಿಯಾನವನ್ನು ಮಾರ್ಚ್ 2020 ರಿಂದ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ದೇಶಾದ್ಯಂತ ಸುಮಾರು 80 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರವನ್ನು ಒದಗಿಸಲಾಗಿದೆ. ಸರ್ಕಾರದಿಂದ ಜನರಿಗೆ ತಿಂಗಳಿಗೆ 5 ಕೆಜಿ ಉಚಿತ ಪಡಿತರ ನೀಡಲಾಗುತ್ತಿದೆ. ಪ್ರಸ್ತುತ, ಈ ಯೋಜನೆಯನ್ನು ಸರ್ಕಾರವು ಹಲವು ಬಾರಿ ವಿಸ್ತರಿಸಿದೆ ಮತ್ತು ಈ ಯೋಜನೆಯು ಸೆಪ್ಟೆಂಬರ್ 30 ರವರೆಗೆ ಪ್ರಸ್ತುತವಾಗಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News