ಅದ್ಧೂರಿ ಅಮಾವಾಸ್ಯೆ: ಮೂರು ದಿನಕ್ಕೆ ಮಾದಪ್ಪನಿಗೆ 1.23 ಕೋಟಿ‌ ಆದಾಯ

ಸೆ.30, ಅ.1 ಹಾಗೂ 2 ರ ಅವಧಿಯಲ್ಲಿ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದ ಆದಾಯವೂ ಹೆಚ್ಚಳವಾಗಿದೆ. 

Written by - Yashaswini V | Last Updated : Oct 4, 2024, 03:34 PM IST
  • ಮೂರೇ ದಿನದಲ್ಲಿ ಮಾದಪ್ಪನ ಬೆಟ್ಟಕ್ಕೆ ಹರಿದುಬಂದ ಹೆಚ್ಚಿನ ಆದಾಯ
  • ಮಹಾಲಯ ಅಮಾವಾಸ್ಯೆ ಸಂದರ್ಭದಲ್ಲಿ ಹೆಚ್ಚಿನ ಭಕ್ತಾದಿಗಳ ಆಗಮನ
  • ಕಾರ್ತಿಕ ಮಾಸದಲ್ಲಿ ಆದಾಯ ಇನ್ನೂ ಹೆಚ್ಚಾಗುವ ನಿರೀಕ್ಷೆ
ಅದ್ಧೂರಿ ಅಮಾವಾಸ್ಯೆ:  ಮೂರು ದಿನಕ್ಕೆ ಮಾದಪ್ಪನಿಗೆ 1.23 ಕೋಟಿ‌ ಆದಾಯ  title=

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆದ ಮಹಾಲಯ ಅಮವಾಸ್ಯೆ ಜಾತ್ರಾ ಮಹೋತ್ಸವಕ್ಕೆ  ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಮೂರು ದಿನಗಳ ಅವಧಿಯಲ್ಲಿ 1.23 ಕೋಟಿ  ಆದಾಯ ಬಂದಿದೆ.

ಸೆ.30, ಅ.1 ಹಾಗೂ 2 ರ ಅವಧಿಯಲ್ಲಿ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಹುಲಿ ವಾಹನ ,ರುದ್ರಾಕ್ಷಿ ವಾಹನ ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ 1,23,91,458 ರೂ. ಆದಾಯ ಬಂದಿದೆ.

ಮೂರು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ 468 ಚಿನ್ನದ ರಥೋತ್ಸವ, 34 ಬೆಳ್ಳಿ ರಥೋತ್ಸವ, 574 ಬಸವ ವಾಹನ, 7112 ಹುಲಿ ವಾಹನ, 288 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆ ಮೂಲಕ 38,48,251 ರೂ ಆದಾಯ ಬಂದಿದೆ. 

ಅಕ್ಟೋಬರ್ ಮೂರರಿಂದ ನವರಾತ್ರಿ ಪ್ರಾರಂಭವಾಗಿದ್ದು ದೀಪಾವಳಿ ಕಾರ್ತಿಕ ಮಾಸ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಇನ್ನು ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ.

ಅಕ್ಟೋಬರ್ ಮೂರರಿಂದ ನವರಾತ್ರಿ ಪೂಜೆ ಮಹೋತ್ಸವ ಪ್ರಾರಂಭವಾಗಿದ್ದು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾನವಮಿ ಆಯುಧ ಪೂಜೆ, ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಮಾಸ ಪ್ರಾರಂಭವಾಗುವುದರಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ  ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಡಳಿತದ ಸಹಕಾರದ ವತಿಯಿಂದ ಮಹಾಲಯ ಜಾತ್ರಾ ಅಮಾವಾಸ್ಯೆ ಯಶಸ್ವಿಯಾಗಿ ನೆರವೇರಿದೆ ಮುಂದಿನ ದಿನಗಳಲ್ಲಿ ವಿಜಯದಶಮಿ ಹಾಗೂ ದೀಪಾವಳಿ ಜಾತ್ರಾ ಮಹೋತ್ಸವ ಇರುವ ಹಿನ್ನೆಲೆ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಎ.ಈ. ರಘು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News