Rajnath Singh: 2027 ರವರೆಗೆ ಭಾರತ ವಿಶ್ವದ ಟಾಪ್-3 ಅರ್ಥವ್ಯವಸ್ಥೆಗಳಲ್ಲಿ ಒಂದಾಗಲಿದೆ ಎಂದ ರಾಜನಾಥ್ ಸಿಂಗ್

Rajnath Singh On Indian Economy: ಬಿಹಾರದ ರೋಹ್ತಾಸ್ ಜಿಲ್ಲೆಯ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಜನಾಥ್ ಸಿಂಗ್ ಮಾತನಾಡಿದ್ದು,  ಭಾರತವು ಪ್ರಸ್ತುತ ವಿಶ್ವದ ಟಾಪ್-5 ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು 2027ರವರೆಗೆ ಟಾಪ್ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ಹೇಳಿದ್ದಾರೆ.   

Written by - Nitin Tabib | Last Updated : Jun 10, 2023, 09:24 PM IST
  • ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು
  • ದೇಶದ ಯುವಕರು ಹೊಸ ಆಲೋಚನೆಗಳೊಂದಿಗೆ ಮುಂದೆ ಬಂದು ಸರ್ಕಾರಕ್ಕೆ ಸಹಾಯ ಮಾಡಬೇಕು ಎಂದು ಹೇಳಿದ್ದಾರೆ.
  • ಇಂದು ನಮ್ಮ ಭಾರತವು ಅತ್ಯಂತ ವೇಗವಾಗಿ ಮುಂದಕ್ಕೆ ಸಾಗುತ್ತಿದ್ದು, ಭಾರತವು ವಿಶ್ವದ ಅಗ್ರ 5 ಆರ್ಥಿಕತೆಗಳನ್ನು ಶಾಮಿಲಾಗಿದೆ.
  • 2027ರ ವೇಳೆಗೆ ಭಾರತವು ವಿಶ್ವದ ಅಗ್ರ 3 ಆರ್ಥಿಕತೆಗಳ ಸಾಲಿಗೆ ಸೇರಲಿದೆ ಎಂದು ಮೋರ್ಗನ್ ಸ್ಟಾನ್ಲಿ ಹೇಳಿದೆ ಎಂದು ಅವರು ಹೇಳಿದ್ದಾರೆ.
Rajnath Singh: 2027 ರವರೆಗೆ ಭಾರತ ವಿಶ್ವದ ಟಾಪ್-3 ಅರ್ಥವ್ಯವಸ್ಥೆಗಳಲ್ಲಿ ಒಂದಾಗಲಿದೆ ಎಂದ ರಾಜನಾಥ್ ಸಿಂಗ್ title=
ಚಿತ್ರ ಕೃಪೆ - ಎಎನ್ಐ

Indian Economy By 2027: ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಸರ್ಕಾರಕ್ಕೆ ಸಹಾಯ ಮಾಡುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಯುವಕರಿಗೆ ಕರೆ ನೀಡಿದ್ದಾರೆ. ಶನಿವಾರ ಬಿಹಾರ ರಾಜ್ಯದ ರೋಹ್ತಾಸ್ ಜಿಲ್ಲೆಯ ಗೋಪಾಲ್ ನಾರಾಯಣ್ ಸಿಂಗ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡುತ್ತಿದ್ದರು. ಇದು ಘಟಿಕೋತ್ಸವ, ಶಿಕ್ಷಣ ಸಮಾರಂಭವಲ್ಲ. ಶಿಕ್ಷಣದಿಂದ ನಾವು ಜ್ಞಾನವನ್ನು ಪಡೆಯುತ್ತೇವೆ, ಆದರೆ ದೀಕ್ಷೆಯಿಂದ ನಾವು ಸಂಸ್ಕೃತಿಯನ್ನು ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ದೇಶದ ಯುವಕರು ಹೊಸ ಆಲೋಚನೆಗಳೊಂದಿಗೆ ಮುಂದೆ ಬಂದು ಸರ್ಕಾರಕ್ಕೆ ಸಹಾಯ ಮಾಡಬೇಕು ಎಂದು ಹೇಳಿದ್ದಾರೆ. ಇಂದು ನಮ್ಮ ಭಾರತವು ಅತ್ಯಂತ ವೇಗವಾಗಿ ಮುಂದಕ್ಕೆ ಸಾಗುತ್ತಿದ್ದು, ಭಾರತವು ವಿಶ್ವದ ಅಗ್ರ 5 ಆರ್ಥಿಕತೆಗಳನ್ನು ಶಾಮಿಲಾಗಿದೆ. 2027ರ ವೇಳೆಗೆ ಭಾರತವು ವಿಶ್ವದ ಅಗ್ರ 3 ಆರ್ಥಿಕತೆಗಳ ಸಾಲಿಗೆ ಸೇರಲಿದೆ ಎಂದು ಮೋರ್ಗನ್ ಸ್ಟಾನ್ಲಿ ಹೇಳಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-Indian Economy: 'ವರ್ಷ 2040 ರವರೆಗೆ 27-28 ಟ್ರಿಲಿಯನ್ ಡಾಲರ್ ಗೆ ತಲುಪಲಿದೆ ಭಾರತದ ಆರ್ಥಿಕತೆ'
 
ರಾಜನಾಥ್ ಸಿಂಗ್ ಮತ್ತೇನು ಹೇಳಿದ್ದಾರೆ?
ಇಂದು ದೇಶದಲ್ಲಿ ಸುಮಾರು 12 ಕೋಟಿ ಮನೆಗಳಿಗೆ ನಲ್ಲಿಗಳ ಮೂಲಕ ನೀರು ತಲುಪುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. 2014ರಲ್ಲಿ ಸುಮಾರು 18 ಸಾವಿರ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಇಂದು ಪ್ರತಿ ಮನೆಗೂ ವಿದ್ಯುತ್ ತಲುಪಿದೆ. ಒಮ್ಮೆ ಸ್ವಾಮಿ ವಿವೇಕಾನಂದರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ. ಸ್ವಾಮೀಜಿಯವರ ಡ್ರೆಸ್ ನೋಡಿದ ವ್ಯಕ್ತಿಯೊಬ್ಬರು ಸ್ವಾಮೀಜಿ, ನೀವೂ ಸಹ ಸಜ್ಜನರಂತೆ ಕಾಣುವಂತೆ ಬಟ್ಟೆ ಬದಲಿಸಿ ಎಂದು ಹೇಳಿದ್ದರು. ಅದಕ್ಕೆ ಉತ್ತರಿಸಿದ್ದ ಸ್ವಾಮೀಜಿ ನಿಮ್ಮ ದೇಶದಲ್ಲಿ ಸಜ್ಜನರನ್ನು ಅವರ ಬಟ್ಟೆಯಿಂದ ಪರಿಗಣಿಸಲಾಗುತ್ತದೆ, ಆದರೆ ನನ್ನ ದೇಶದಲ್ಲಿ ಸಜ್ಜನರನ್ನು ಅವರ ಬಟ್ಟೆಯಿಂದ ಗುರುತಿಸಲಾಗುವುದಿಲ್ಲ, ಆದರೆ ಅವರ ಸ್ವಭಾವದಿಂದ ಗುರುತಿಸಲಾಗುತ್ತದೆ ಎಂದು ಅವರು ಹೇಳಿದ್ದರು ಎಂದು ರಾಜನಾಥ್ ವಿದ್ಯಾರ್ಥಿಗಳಿಗೆ  ಬೋಧನೆ ಮಾಡಿದ್ದಾರೆ.

ಇದನ್ನೂ ಓದಿ-General Elections 2024: ಒಂದರ ಮೇಲೊಂದರಂತೆ ರಾಹುಲ್ ಗಾಂಧಿ ಮೇಲೆ ಆರೋಪಗಳ ಸುರಿಮಳೆಗೈದ ಅಮಿತ್ ಶಾ
 
"ಜನರನ್ನು ಕರೆದುಕೊಂಡು ಹೋಗಬೇಕು"
ಎಷ್ಟೇ ತಿಳುವಳಿಕೆ ಇದ್ದರೂ ಜನರನ್ನು ಜೊತೆಗೆ ಕರೆದುಕೊಂಡು ಹೋಗಬೇಕು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. ನಮ್ಮ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಕುಚಿತ ಮನೋಭಾವದವರು ಯಾರೂ ದೊಡ್ಡವರಾಗುವುದಿಲ್ಲ ಮತ್ತು ಹಾಳಾದ ಮನೋವೃತ್ತಿಯಿಂದ ಯಾರೂ ನಿಲ್ಲುವುದಿಲ್ಲ ಎಂದು ಹೇಳುತ್ತಿದ್ದರು. ಸಂಕುಚಿತ ಮನೋಭಾವದ ವ್ಯಕ್ತಿ ಗೌರವವನ್ನು ಪಡೆಯಲು ಸಾಧ್ಯವಿಲ್ಲ, ಯಾವುದೇ ಕೊಡುಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News