ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ನೀಡಲಿದೆ 2 ಲಕ್ಷ ರೂಪಾಯಿ! ಪಡೆಯಬೇಕಾದರೆ ಹೀಗೆ ಅರ್ಜಿ ಸಲ್ಲಿಸಿ

Pradhan Mantri Jeevan Jyoti Bima Yojana : ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲವಾಗುವಂತೆ ಸರ್ಕಾರ  2 ಲಕ್ಷ ರೂಪಾಯಿ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಏನು ಮಾಡಬೇಕು ಎನ್ನುವ ಮಾಹಿತಿ ಇಲ್ಲಿದೆ. 

Written by - Ranjitha R K | Last Updated : Apr 28, 2025, 11:15 AM IST
  • ಬದುಕು ಹೇಗೆ ಸಾಗುತ್ತದೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ.
  • ಜೀವನದಲ್ಲಿ ಸಮಸ್ಯೆಗಳು, ಸವಾಲುಗಳು ಮತ್ತು ಬಿಕ್ಕಟ್ಟು ಯಾವಾಗ ಬೇಕಾದರೂ ಎದುರಾಗಬಹುದು
  • ಕೇಂದ್ರ ಸರ್ಕಾರವು ಹಲವಾರು ವಿಮಾ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.
ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ನೀಡಲಿದೆ 2  ಲಕ್ಷ ರೂಪಾಯಿ! ಪಡೆಯಬೇಕಾದರೆ ಹೀಗೆ ಅರ್ಜಿ ಸಲ್ಲಿಸಿ

Pradhan Mantri Jeevan Jyoti Bima Yojana : ಬದುಕು ಹೇಗೆ ಸಾಗುತ್ತದೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ. ಜೀವನದಲ್ಲಿ ಸಮಸ್ಯೆಗಳು, ಸವಾಲುಗಳು ಮತ್ತು ಬಿಕ್ಕಟ್ಟು ಯಾವಾಗ ಬೇಕಾದರೂ ಎದುರಾಗಬಹುದು. ಈ ಅನಿಶ್ಚಿತತೆಗಳಿಂದ ಜನರನ್ನು ಹೊರ ತರಲು ಕೇಂದ್ರ ಸರ್ಕಾರವು ಹಲವಾರು ವಿಮಾ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಮುಖವಾದುದು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY). ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ನೆರವು ಮತ್ತು ವೈದ್ಯಕೀಯ ವಿಮೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದು ಕೈಗೆಟುಕುವ ಜೀವ ವಿಮೆಯನ್ನು ನೀಡುತ್ತದೆ. 

 ಈ ಯೋಜನೆಯಲ್ಲಿ ಎಷ್ಟು ವಿಮೆ ಸಿಗುತ್ತದೆ? : 
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳಿಗೆ ಅಗತ್ಯವಾದ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ, ಪ್ರತಿ ವರ್ಷ, ಫಲಾನುಭವಿಗಳು 2  ಲಕ್ಷ ರೂ. ವರೆಗಿನ ವೈದ್ಯಕೀಯ ವಿಮಾ ರಕ್ಷಣೆಯನ್ನು ಪಡೆಯಬಹುದು.ವೈದ್ಯಕೀಯ ವೆಚ್ಚಗಳನ್ನು ಭರಿಸಲು ಕಷ್ಟಪಡುತ್ತಿರುವವರಿಗೆ ಇದು ಸಹಾಯ ಮಾಡುತ್ತದೆ.   ಈ ವಿಮೆ ಕೈಗೆಟುಕುವ ಬೆಲೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿದೆ. ವಾರ್ಷಿಕ ಪ್ರೀಮಿಯಂ ಕೇವಲ 436  ರೂ. ಅಂದರೆ ತಿಂಗಳಿಗೆ 36 ರೂ.ಪಾವತಿಸಿದರೆ ಸಾಕು. ಈ ಕಾರ್ಯಕ್ರಮವು ಕಡಿಮೆ ಆದಾಯದ ಕುಟುಂಬಗಳಿಗೆ ತಮ್ಮ ಆರೋಗ್ಯ ರಕ್ಷಣೆಗೆ ಸಹಾಯ ಮಾಡುತ್ತದೆ. ಈ ವಿಮಾ ಯೋಜನೆಗೆ ಸೇರಿದರೆ, 80C ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಬಹುದು.

ಇದನ್ನೂ ಓದಿ : ಪಿಎಫ್ ಚಂದಾದಾರರಿಗೆ ಭರ್ಜರಿ ಲಾಭ !ಪಿಂಚಣಿ ಹೆಚ್ಚಳದಿಂದ ಪಿಎಫ್ ವರ್ಗಾವಣೆಯವರೆಗೆ ಪ್ರಮುಖ ನಿಯಮಗಳಲ್ಲಿ ಬದಲಾವಣೆ ತಂದ ಇಪಿಎಫ್‌ಒ

ಪಾವತಿಸುವುದು ಹೇಗೆ? : 
ಈ ಯೋಜನೆಯು ವರ್ಷಪೂರ್ತಿ ಲಭ್ಯವಿದೆ. ಈ ಯೋಜನೆ ಅಡಿಯಲ್ಲಿ ಸೂಕ್ತವಾದ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿಯಲ್ಲಿ ಜೂನ್ 1 ರಿಂದ ಮೇ 31 ರವರೆಗೆ ವಿಮಾ ರಕ್ಷಣೆ ಇರುತ್ತದೆ. ಇದರರ್ಥ ಒಮ್ಮೆ ನೋಂದಾಯಿಸಿದ ನಂತರ, ಪಾಲಿಸಿದಾರರು ವರ್ಷವಿಡೀ ನಿರಂತರ ವಿಮಾ ರಕ್ಷಣೆಯನ್ನು ಪಡೆಯುತ್ತಾರೆ. ವಾರ್ಷಿಕ ಮೊತ್ತ  436 ರೂ.ಯನ್ನು ನೇರವಾಗಿ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಯಿಂದ ಕಡಿತಗೊಳಿಸಲಾಗುತ್ತದೆ. ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಅರ್ಜಿದಾರರು 18 ರಿಂದ 50 ವರ್ಷದೊಳಗಿನವರಾಗಿರಬೇಕು. ಈ ವಿಮಾ ಯೋಜನೆಯು ಕೇವಲ ಒಂದು ವರ್ಷಕ್ಕೆ ಮಾತ್ರ ಮಾನ್ಯವಾಗಿರುತ್ತದೆ. ಹಾಗಾಗಿ   ಪ್ರತಿ ವರ್ಷ ಈ ವಿಮಾ ಯೋಜನೆಯನ್ನು ನವೀಕರಿಸಬೇಕು.

ಈ ಯೋಜನೆಯ ಲಾಭವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಅಂಚೆ ಕಚೇರಿಗಳು ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕುಗಳ ಮೂಲಕ ಪಡೆಯಬಹುದು. ಪಾಲಿಸಿದಾರರು ಮರಣಹೊಂದಿದರೆ, ವಿಮಾ ಮೊತ್ತವನ್ನು ಅವರ ನಾಮಿನಿಗೆ ಪಾವತಿಸಲಾಗುತ್ತದೆ. ಆದರೆ ವಿಮಾ ಪಾಲಿಸಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯನ್ನು ಮುಚ್ಚಿದರೆ ಅಥವಾ ಪ್ರೀಮಿಯಂ ಪಾವತಿಸಲು ಸಾಕಷ್ಟು ಹಣವಿಲ್ಲದಿದ್ದರೆ ಕವರೇಜ್ ಸ್ವಯಂಚಾಲಿತವಾಗಿ ನಿಲ್ಲುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಮುಖ್ಯ. ಈ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಒಂದೇ ಒಂದು ಪಾಲಿಸಿಯನ್ನು ಹೊಂದಲು ಅವಕಾಶವಿರುತ್ತದೆ.

ಇದನ್ನೂ ಓದಿ : ಅಕ್ಷಯ ತೃತೀಯಗೂ ಮುನ್ನ ಆಭರಣ ಪ್ರಿಯರಿಗೆ ಶುಭ ಸುದ್ದಿ.. ಗಣನೀಯವಾಗಿ ಕುಸಿದ ಚಿನ್ನದ ಬೆಲೆ!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News