Karnataka Budget 2022: ಬೊಮ್ಮಾಯಿ ಬಜೆಟ್​ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ ಕೊಡುಗೆ

ಮುಖ್ಯಮಂತ್ರಿ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. 

Written by - Chetana Devarmani | Last Updated : Feb 1, 2023, 12:25 PM IST
Karnataka Budget 2022: ಬೊಮ್ಮಾಯಿ ಬಜೆಟ್​ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ ಕೊಡುಗೆ
Live Blog

ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆ ಆಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮಾರ್ಚ್ 4) ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆಗಲಿದೆ. ಬಜೆಟ್​ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ಈಗಾಗಲೇ ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.
 

1 February, 2023

  • 12:25 PM

    Income Tax Budget 2023 Live Upadates : ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷದ ವರೆಗೆ ತೆರಿಗೆ ವಿನಾಯಿತಿ ವಿಸ್ತರಣೆ 

    • ವರ್ಷಕ್ಕೆ ₹ 3 ಲಕ್ಷದವರೆಗೆ ಯಾವುದೇ ತೆರಿಗೆ ಇರುವುದಿಲ್ಲ
    • ₹ 6 ರಿಂದ 9 ಲಕ್ಷದವರೆಗೆ ಶೇ 10
    • ₹ 12ರಿಂದ 15 ಲಕ್ಷಕ್ಕೆ ಶೇ 15
    • ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30 ರಷ್ಟು ತೆರಿಗೆ ವಿಧಿಸಲಾಗುವುದು. 
  • 14:47 PM

    ಬಜೆಟ್ ಮಂಡನೆ ಮುಕ್ತಾಯ. ಬಜೆಟ್ ಓದಿ ಮುಗಿಸಿದ ಸಿಎಂ ಬೊಮ್ಮಾಯಿ, ಎರಡು ಗಂಟೆಗಳ ಕಾಲ ಬಜೆಟ್ ಮಂಡನೆ ಮಾಡಿದ ಸಿಎಂ. ಬಜೆಟ್ ಓದಿದ ಬಳಿಕ ಸಚಿವರು, ಬಿಜೆಪಿ ಶಾಸಕರ ಜೊತೆ ವಿಕ್ಟರಿ ಸಿಂಬಲ್ ಪ್ರದರ್ಶನ ಮಾಡಿದ ಸಿಎಂ. 

  • 14:42 PM

    Karnataka Budget 2022 Live: 186 ಕೋಟಿ ವೆಚ್ಚದಲ್ಲಿ ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ. ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ 
     

  • 14:36 PM

    Karnataka Budget 2022 Live: ನೇಕಾರ ಹಿತರಕ್ಷಣೆ

    ' ನೇಕಾರಸಮ್ಮಾನ್' ಯೋಜನೆಯಡಿ ನೊಂದಾಯಿತ ಕೈಮಗ್ಗ ನೇಕಾರರ ವಾರ್ಷಿಕ ನೆರವು 5,000 ರೂ. ಗಳಿಗೆ ಹೆಚ್ಚಳ. ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್ ಗಳ ಮೂಲಕ ನೇಕಾರರು ಪಡೆಯುವ ಸಾಲದ ಮೇಲೆ ಶೇ.8 ರಷ್ಟು ಬಡ್ಡಿ  ಸಹಾಯಧನ ಸೌಲಭ್ಯ. ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ - ಸಿಎಂ ಬೊಮ್ಮಾಯಿ 

  • 14:26 PM

    Karnataka Budget 2022 Live:  ಅಪೌಷ್ಟಿಕತೆ ನಿವಾರಣೆಗೆ ಒತ್ತು

    ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ರೂ.  ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸರವರ್ಧಿತ ಅಕ್ಕಿ ವಿತರಣೆ. ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸಿ. ಅಪೌಷ್ಟಿಕತೆ ನಿವಾರಿಸುವ "ಸ್ಫೂರ್ತಿ" ಯೋಜನೆ ರಾಜ್ಯಾದ್ಯಂತ ವಿಸ್ತರಣೆ - ಸಿಎಂ ಬೊಮ್ಮಾಯಿ 

  • 14:17 PM

    Karnataka Budget 2022 Live: ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್​ ನಿರ್ಮಾಣ - ಸಿಎಂ 

    ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್​ ಸ್ಥಾಪನೆ. ಮೆಗಾ ಜ್ಯುವೆಲರಿ ಪಾರ್ಕ್​ನಿಂದ 10 ಸಾವಿರ ಜನರಿಗೆ ಉದ್ಯೋಗ, ಧಾರವಾಡದಲ್ಲಿ FMCG ಕ್ಲಸ್ಟರ್ ಅಭಿವೃದ್ಧಿ, ವಿಶೇಷ ಪ್ರೋತ್ಸಾಹ ಧನ, ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ ಟೆಕ್ಸ್ಟ್​ಟೈಲ್ ಪಾರ್ಕ್​, ನವಲಗುಂದ ಮತ್ತು ವಿಜಯಪುರದಲ್ಲಿ ಜವಳಿ ಪಾರ್ಕ್​, ಬಳ್ಳಾರಿಯಲ್ಲಿ ಜೀನ್ಸ್ ಮತ್ತು ಉಡುಪು ಸಂಬಂಧಿತ ಪಾರ್ಕ್ ಸ್ಥಾಪನೆ, ರಾಜ್ಯದಲ್ಲಿ ಸೆಮಿಕಂಡಕ್ಟರ್​ ತಯಾರಿಕೆಗಳ ಉದ್ಯಮಗಳಿಗೆ ಒತ್ತು - ಸಿಎಂ ಬೊಮ್ಮಾಯಿ

  • 14:08 PM

    Karnataka Budget 2022 Live: ಕೃಷಿ ಯಂತ್ರೋಪಕರಣ ಬಳಕೆ ಉತ್ತೇಜನಕ್ಕೆ ಯೋಜನೆ

    ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದೆ. ಕೃಷಿ ಯಂತ್ರೋಪಕರಣ ಬಳಕೆ ಉತ್ತೇಜನಕ್ಕೆ 'ರೈತರ ಶಕ್ತಿ' ಯೋಜನೆ ಜಾರಿಗೆ ತರಲಾಗುವುದು. ಪ್ರತಿ ಎಕರೆಗೆ 250 ಡೀಸೆಲ್​ ಸಹಾಯ ಧನ, ರೈತರ ಶಕ್ತಿಗೆ 600 ಕೋಟಿ ಅನುದಾನ ನೀಡಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್​ ಸ್ಥಾಪನೆ ಮಾಡಲಾಗುವುದು. ಬಡ್ಡಿ ರಿಯಾಯಿತಿ ಯೋಜನೆ ಅಡಿ 33 ಲಕ್ಷ
    ರೈತರಿಗೆ 24 ಸಾವಿರ ಕೋಟಿ ಸಾಲ ಸೌಲಭ್ಯ ನೀಡಲಾಗುವುದು. ಗ್ರಾಮೀಣ ರೈತರ ಆರೋಗ್ಯ ಸೇವೆಗೆ ಯಶಸ್ವಿನಿ ಯೋಜನೆ ಮರುಜಾರಿ ಮಾಡಲಾಗುವುದು. ಯಶಸ್ವಿನಿ ಯೋಜನೆ 300 ಕೋಟಿ ಅನುದಾನ ನೀಡಲಾಗಿದೆ - ಸಿಎಂ ಬೋಮ್ಮಾಯಿ 

  • 14:06 PM

    Karnataka Budget 2022 Live:  ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ 

    ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗುವುದು. ಹೋಬಳಿ ಮಟ್ಟದಲ್ಲಿ "ಮಾದರಿ ಶಾಲೆ"ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ. ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. 'ನೋಡಿ ಕಲಿ ಮಾಡಿ ತಿಳಿ' ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ. Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು. ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ - ಸಿಎಂ ಬೊಮ್ಮಾಯಿ 

  • 14:02 PM

    Karnataka Budget 2022 Live: ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳ ಉತ್ತೇಜನಕ್ಕೆ ಕ್ರೀಡಾ ಅಂಕಣ

    ಯುವಕರ ಸ್ವ-ಉದ್ಯೋಗ, ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ನಿರ್ಧಾರಿಸಲಾಗಿದ್ದು, ಪ್ರತೀ ಗ್ರಾ.ಪಂನಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.  ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ 100 ಕೋಟಿ ರೂಪಾಯಿ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳ ಉತ್ತೇಜನಕ್ಕೆ ಕ್ರೀಡಾ ಅಂಕಣ ಸ್ಥಾಪನೆ, ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 504 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಸಾಹಸ ಕ್ರೀಡೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ನವೀಕರಣ, ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ವಿವಿ ಗೇಮ್ಸ್‌ 2021 ಆಯೋಜನೆ ಮಾಡಲಾಗುವುದು - ಸಿಎಂ ಬೊಮ್ಮಾಯಿ

  • 13:59 PM

    Karnataka Budget 2022 Live: ಆರ್ಥಿಕ ವರ್ಷ 2022-23

    ಒಟ್ಟು ರಾಜಸ್ವ ಜಮೆ: ₹1,89,887.54

    ಒಟ್ಟು ವೆಚ್ಚ: ₹204586.68

    ರಾಜಸ್ವ ಕೊರತೆ: ₹14699.14

  • 13:53 PM

    Karnataka Budget 2022 Live: ನೇಕಾರ ಸಮ್ಮಾನ್ ಯೋಜನೆಯಡಿ ವಾರ್ಷಿಕ ನೆರವು

    ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ವಾರ್ಷಿಕ ನೆರವುನೇಕಾರರಿಗೆ ವಾರ್ಷಿಕ ನೆರವು 5 ಸಾವಿರ ರೂಪಾಯಿಗಳಿಗೆ ಹೆಚ್ಚಳ, ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್​ಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ, ನೇಕಾರರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಿದ ಸರ್ಕಾರ, ಬೇಲೂರು, ಹಳೆಬೀಡು ಸ್ಮಾರಕಗಳನ್ನು ಯುನೆಸ್ಕೋಗೆ ಸೇರಿಸಲು ಕ್ರಮ, ಹಂಪಿ, ಬಾದಾಮಿ, ಐಹೊಳೆ ಸೇರಿ ರಾಜ್ಯದಲ್ಲಿ ಪ್ರವಾಸಿ ವೃತ್ತ ಅಭಿವೃದ್ಧಿಬೇಲೂರು, ಹಳೆಬೀಡು ಸ್ಮಾರಕಗಳನ್ನು ಯುನೆಸ್ಕೋಗೆ ಸೇರಿಸಲು ಕ್ರಮ, ಜೋಗ ಜಲಪಾತ ಬಳಿ ಹೋಟೆಲ್ ಮತ್ತು ರೋಪ್​ವೇಗಾಗಿ 116 ಕೋಟಿ, ನಂದಿ ಬೆಟ್ಟದಲ್ಲಿನ ರೋಪ್​ ವೇ ನಿರ್ಮಾಣಕ್ಕೆ 93 ಕೋಟಿ ರೂಪಾಯಿ, ಅಂಜನಾದ್ರಿ ಬೆಟ್ಟಕ್ಕೆ 100 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ, ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ - ಸಿಎಂ ಬೊಮ್ಮಾಯಿ 

    ಕ್ರೀಡಾಂಗಣಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿಯ ಯೋಜನೆ: ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪುಗಳ ರಚನೆ, ಕ್ರೀಡಾಂಗಣಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿಯ ಯೋಜನೆ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 504 ರೂ.ನಲ್ಲಿ ಕ್ರೀಡಾ ಅಂಕಣ ನಿರ್ಮಾಣ, ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಆಯೋಜನೆ - ಸಿಎಂ ಬೊಮ್ಮಾಯಿ 

  • 13:51 PM

    Karnataka Budget 2022 Live: ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ 

    ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ, ಕೃಷ್ಣಾ ಮೇಲ್ದಂಡ 3ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ -ಸಿಎಂ ಬೊಮ್ಮಾಯಿ 

    ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್: ಹಿಂದುಳಿದ ತಾಲೂಕುಗಳ ಅಭಿವೃದ್ದಿಗೆ 3,000 ಸಾವಿರ ಕೋಟಿಕುರಿಗಾರರಿಗೆ ಕುರಿದೊಡ್ಡಿ ನಿರ್ಮಿಸಲು ಸಹಾಯಧನಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ಪೆಟ್ರೋಲ್, ಡೀಸೆಲ್ ಮೇಲಿನ ರಾಜ್ಯ ಸುಂಕ ಏರಿಕೆ ಇಲ್ಲ -ಸಿಎಂ ಬೊಮ್ಮಾಯಿ 

    ನಾರಾಯಣ ಗುರು ಶಾಲೆಗಳ ಸ್ಥಾಪನೆ: ರಾಯಚೂರು ವಿವಿಗೆ 15 ಕೋಟಿ ರೂಪಾಯಿ, ಬೆಳಗಾವಿಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ, ಕೊಡವ ಜನಾಂಗದ ಅಭಿವೃದ್ಧಿಗೆ 50 ಕೋಟಿ ರೂಪಾಯಿ, ಕ್ರಿಶ್ಚಿಯನ್ನರ ಅಭಿವೃದ್ಧಿಗೆ 50 ಕೋಟಿ ರೂಪಾಯಿ, ನಾರಾಯಣ ಗುರು ಸ್ಮರಣಾರ್ಥ ಶಾಲೆಗಳ ಸ್ಥಾಪನೆ, ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗದಲ್ಲಿ ಶಾಲೆಗಳ ಸ್ಥಾಪನೆ -ಸಿಎಂ ಬೊಮ್ಮಾಯಿ 

    ಕಾಶಿ ಯಾತ್ರಾರ್ಥಿಗಳಿಗೆ 5 ಸಾವಿರ ಸಹಾಯಧನ: 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ 5 ಸಾವಿರ ಸಹಾಯಧನರಾಜ್ಯದಲ್ಲಿ 300 ಮಹಿಳಾ ಸ್ವಾಸ್ಥ್ಯ ಕೇಂದ್ರ ಸ್ಥಾಪನೆಶ್ರೀಶೈಲದಲ್ಲಿ 85 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿಗೃಹಪಹಣಿ, ಜಾತಿ ಪ್ರಮಾಣಪತ್ರ, ಅಟ್ಲಾಸ್, ಕಂದಾಯ ದಾಖಲೆ ಮನೆ ಬಾಗಿಲಿಗೆವೀರಶೈವ ಲಿಂಗಾಯತ ಅಭಿವೃದ್ಧಿಗೆ 100 ಕೋಟಿ -ಸಿಎಂ ಬೊಮ್ಮಾಯಿ 

  • 13:50 PM

    Karnataka Budget 2022 Live:  ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜನೆ

    ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ, ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜನೆ, ತಳಸಮುದಾಯದ ವಿಶಿಷ್ಟ ಕಲೆಗಳ ಅಭಿವೃದ್ಧಿಗೆ ಒತ್ತು, ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಯೋಜನೆ -ಸಿಎಂ ಬೊಮ್ಮಾಯಿ 

    ರಾಯಚೂರಿನಲ್ಲಿ ಗ್ರೀನ್​ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ವರದಿ, ಮೈಸೂರು ವಿಮಾನ ನಿಲ್ದಾಣದ ರನ್​ವೇ ವಿಸ್ತರಣೆ -ಸಿಎಂ ಬೊಮ್ಮಾಯಿ 

  • 13:47 PM

    Karnataka Budget 2022 Live: 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ

    ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಆಯ್ದ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದಿದ್ದಾರೆ. ರಾಜ್ಯಾದ್ಯಂತ ಡಿಜಿಟಲ್​ ಗ್ರಂಥಾಲಯ ಸ್ಥಾಪನೆ, ಪ್ರತೀ ವರ್ಷ ಶಿಕ್ಷಕರಿಗೆ ಪುಲೆ ಪ್ರಶಸ್ತಿ ಘೋಷಣೆ,  15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ. 

  • 13:45 PM

    Karnataka Budget 2022 Live:ಮರಾಠ ಅಭಿವೃದ್ಧಿಗೆ 50 ಕೋಟಿ ರೂಪಾಯಿ

    ಮರಾಠ ಅಭಿವೃದ್ಧಿಗೆ 50 ಕೋಟಿ ರೂಪಾಯಿ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು. ರಾಜ್ಯದ 52 ಲಕ್ಷ ಮಕ್ಕಳಿಗೆ ಹಾಲಿನ ಪುಡಿ, ಪ್ರವಾಸಿ ಗೈಡ್​ಗಳಿಗೆ ಮಾಸಿಕ 2 ಸಾವಿರ ರೂ. ಗೌರವ ಧನ, ವಿಧವಾ ವೇತನ, ಲೈಂಗಿಕ ಅಲ್ಪಸಂಖ್ಯಾತರ ಮಾಸಿಕ ಪಿಂಚಣಿ ಹೆಚ್ಚಳ, ಮರಾಠ ಅಭಿವೃದ್ಧಿಗೆ 50 ಕೋಟಿ ರೂಪಾಯಿ - ಸಿಎಂ ಬೊಮ್ಮಾಯಿ

    ಸಿನಿಮಾ ಸಬ್ಸಿಡಿ ವಿಸ್ತರಣೆ: ಸಿನಿಮಾ ಸಬ್ಸಿಡಿ 125 ರಿಂದ 200 ಕನ್ನಡ ಚಲನಚಿತ್ರಗಳಿಗೆ ವಿಸ್ತರಣೆ, ಮೇಕೆದಾಟು ಯೋಜನೆಗೆ 1000 ಸಾವಿರ ಕೋಟಿ, ಬೆಳಗಾವಿಗೆ ಪ್ರಾದೇಶಿಕ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, 8 ಪುಟಗಳಲ್ಲಿ ಪ್ರಕಟಗೊಳ್ಳುವ ಪತ್ರಿಕೆಗಳಿಗೆ ಹೊಸ ಯೋಜನೆ, ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ, ಅಲ್ಪಸಂಖ್ಯಾತ ವಸತಿ ಶಾಲೆಗಳಿಗೆ ಎಪಿಜೆ ಅಬ್ದುಲ್ ಕಲಾಂ ಶಾಲೆಗಳೆಂದು ಮರುನಾಮಕರಣಮಾರುಕಟ್ಟೆ ಸ್ಥಾಪಿಸಲು 50 ಕೋಟಿ ರೂಪಾಯಿ ನಿಗದಿ

  • 13:37 PM

    Karnataka Budget 2022 Live: ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ

    ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ , 250 ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ, 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ, ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ ಮಾಡಲಾಗುವುದು, ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ, 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಕಿಟ್, ಲ್ಯಾಬ್ ಇನ್ ಎ ಕಿಟ್ ವಿತರಣೆ ಮಾಡಲಾಗುವುದು, ರಾಜ್ಯದ ಹೆಣ್ಣು ಮಕ್ಕಳಿಗೆ  ಮಾಸಿಕ ದಿನಗಳಿಗೆ ನ್ಯಾಪ್ಕಿನ್​ ನೀಡಲಾಗುವುದು - ಸಿಎಂ ಬೊಮ್ಮಾಯಿ 
     

  • 13:35 PM

    Karnataka Budget 2022 Live: ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಹೊಸ ಕಾರ್ಯಕ್ರಮ

    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಪಿಂಚಣಿ ₹3000 ರಿಂದ ₹10,000 ಹೆಚ್ಚಳ, ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಹೊಸ ಕಾರ್ಯಕ್ರಮ, ಮೊದಲ ಬಾರಿಗೆ ಕೃಷಿ ಜಮೀನು ಮತ್ತು ಇತರ ಸ್ವತ್ತುಗಳ ಡ್ರೋನ್ ಆಧಾರಿತ ಸರ್ವೇ, ₹287 ಕೋಟಿ ವೆಚ್ಚ ದಲ್ಲಿ ಮೂರು ವರ್ಷದಲ್ಲಿ ಡ್ರೋನ್ ಸರ್ವೇ ಸಂಪೂರ್ಣ ಗುರಿ, ಗ್ರಾಮ ಸಹಾಯಕರಿಗೆ ನೀಡುತ್ತಿರುವ ಮಾಸಿಕ ಗೌರವ ಧನವನ್ನ ₹1000 ಹೆಚ್ಚಳ - ಸಿಎಂ ಬೊಮ್ಮಾಯಿ 

  • 13:30 PM

    Karnataka Budget 2022 Live: ಮೇಕೆದಾಟು ಯೋಜನೆಗೆ 1000 ಕೋಟಿ ಅನುದಾನ 

    ಮೇಕೆದಾಟು ಯೋಜನೆಗೆ ಆಯವ್ಯಯದಲ್ಲಿ 1000 ಕೋಟಿ ಅನುದಾನವನ್ನು ಸಿಎಂ ಬೊಮ್ಮಾಯಿ ಮೀಸಲಿಟ್ಟಿದ್ದಾರೆ.  

    ತೆರಿಗೆ ಪ್ರಸ್ತಾವನೆಗಳು:  ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ದರ ಹೆಚ್ಚಿಸುವುದಿಲ್ಲ . 22-23 ನೇ ಸಾಲಿಗೆ ವಾಣಿಜ್ಯ ತೆರಿಗೆಗಳ ಇಲಾಖೆಗೆ 77010 ಕೋಟಿ ರೂ ತೆರಿಗೆ ಸಂಗ್ರಹಣೆ ಗುರಿ ನಿಗದಿ. 2 ಲಕ್ಷ ಬೀದಿ ಬದಿ ವ್ಯಪಾರಿಗಳಿಗೆ ಸಾಲಗಳ ಮೇಲಿನ ಮುದ್ರಾಂಕ ಶುಲ್ಕ ವಿನಾಯಿತಿ- 2 ಲಕ್ಷ ವ್ಯಾಪಾರಿಗಳಿಗೆ ಅನುಕೂಲ. ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ. ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆ ಜಿ ಗೆ 50 ರೂ ಪ್ರೋತ್ಸಾಹಧನ ಹೆಚ್ಚಳ. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. 

    ನೂತ‌ನ 100 ಪಶುಚಿಕಿತ್ಸಾಲಯಗಳ ಪ್ರಾರಂಭ. ರಾಜ್ಯದಲ್ಲಿ ಗೋಶಾಲೆಗಳ ಸಂಖ್ಯೆ 100 ಕ್ಕೆ ಹೆಚ್ಚಳ 50 ಕೋಟಿ ರೂ ಅನುದಾನ. ಗೋಶಾಲೆಗಳಲ್ಲಿ ಗೋವುಗಳ ದತ್ತು ಪ್ರೋತ್ಸಾಹ ಕ್ಕೆ ರಾಜ್ಯದಲ್ಲಿ ಮೊದಲ ಬಾರಿಗರ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ. 

  • 13:24 PM

    Karnataka Budget 2022 Live: ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ

    ಗದಗ-ಯಲವಿಗಿಗೆ 640 ಕೋಟಿ ರೂ. ವೆಚ್ಚದಲ್ಲಿ ನೂತನ ರೈಲು ಮಾರ್ಗ ನಿರ್ಮಿಸಲಾಗುವುದು. ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ, 927 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ಮಾರ್ಗ, ರಾಜ್ಯದಲ್ಲಿ 20, ನೂತನ ರೈಲ್ವೆ ಮೇಲ್ಸೇತುವೆ ನಿರ್ಮಾಣ, 186 ಕೋಟಿ ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ದಾವಣಗೆರೆ, ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ವರದಿ, ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ, 30 ಕೋಟಿ ವೆಚ್ಚದಲ್ಲಿ ಹೆಲಿಪೋರ್ಟ್‌ಗಳ ಅಭಿವೃದ್ಧಿ,ಮಡಿಕೇರಿ, ಚಿಕ್ಕಮಗಳೂರು, ಹಂಪಿಯಲ್ಲಿ ಅಭಿವೃದ್ಧಿ ಮಾಡಲಾಗುವುದು  ಎಂದು ಸಿಎಂ ಬಸವರಾಜ ಬೋಮಯಿ ಹೇಳಿದ್ದಾರೆ. 

  • 13:19 PM

    Karnataka Budget 2022 Live: ಮರಾಠ ಅಭಿವೃದ್ಧಿಗೆ 50 ಕೋಟಿ ರೂಪಾಯಿ 

    ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜುರಾಜ್ಯದ 52 ಲಕ್ಷ ಮಕ್ಕಳಿಗೆ ಹಾಲಿನ ಪುಡಿಪ್ರವಾಸಿ ಗೈಡ್​ಗಳಿಗೆ ಮಾಸಿಕ 2 ಸಾವಿರ ರೂ. ಗೌರವ ಧನವಿಧವಾ ವೇತನ, ಲೈಂಗಿಕ ಅಲ್ಪಸಂಖ್ಯಾತರ ಮಾಸಿಕ ಪಿಂಚಣಿ ಹೆಚ್ಚಳಮರಾಠ ಅಭಿವೃದ್ಧಿಗೆ 50 ಕೋಟಿ ರೂಪಾಯಿ. 

    ಸಿನಿಮಾ ಸಬ್ಸಿಡಿ ವಿಸ್ತರಣೆ: ಸಿನಿಮಾ ಸಬ್ಸಿಡಿ 125ರಿಂದ 200 ಕನ್ನಡ ಚಲನಚಿತ್ರಗಳಿಗೆ ವಿಸ್ತರಣೆ ಮಾಡಲಾಗಿದೆ. ಮೇಕೆದಾಟು ಯೋಜನೆಗೆ 1000 ಸಾವಿರ ಕೋಟಿ, ಬೆಳಗಾವಿಗೆ ಪ್ರಾದೇಶಿಕ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, 8 ಪುಟಗಳಲ್ಲಿ ಪ್ರಕಟಗೊಳ್ಳುವ ಪತ್ರಿಕೆಗಳಿಗೆ ಹೊಸ ಯೋಜನೆ, ತುರ್ತು ವೈದ್ಯಕೀಯ ಸೇವೆಗೆ ಏರ್ ಆ್ಯಂಬುಲೆನ್ಸ್, ಕೊಡಗು ಮತ್ತು ಜಂಬೋಟಿ ಜೇನು ಜನಪ್ರಿಯತೆಗೆ ಆದ್ಯತೆ, ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ, ಮುಖ್ಯಮಂತ್ರಿ ಆರೋಗ್ಯವಾಹಿನಿ ಘೋಷಣೆ, ಹಾವೇರಿ, ಶಿಗ್ಗಾಂವಿ ಆಸ್ಪತ್ರೆ ಮೇಲ್ದರ್ಜೆಗೆ, ಅಲ್ಪಸಂಖ್ಯಾತ ವಸತಿ ಶಾಲೆಗಳಿಗೆ ಎಪಿಜೆ ಅಬ್ದುಲ್ ಕಲಾಂ ಶಾಲೆಗಳೆಂದು ಮರುನಾಮಕರಣ, ಮಾರುಕಟ್ಟೆ ಸ್ಥಾಪಿಸಲು 50 ಕೋಟಿ ರೂಪಾಯಿ ನಿಗದಿ - ಸಿಎಂ ಬೊಮ್ಮಾಯಿ

    ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ: ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ, ನೋಂದಣಿ ಕಚೇರಿಗಳ ಉನ್ನತೀಕರಣಕ್ಕೆ 406 ಕೋಟಿ  ಅನುದಾನ ನೀಡಲಾಗಿದೆ. ಮಹಾನಗರ ಪಾಲಿಕೆಗೆ 15 ಕೋಟಿ ರೂಪಾಯಿ, ದಾಖಲೆ ಸ್ಕ್ಯಾನಿಂಗ್​ಗಾಗಿ 15 ಕೋಟಿ ರೂಪಾಯಿ ಮೀಸಲಿಡಲಾಗಿದೆ. ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ  ಅನುದಾನ - ಸಿಎಂ ಬೊಮ್ಮಾಯಿ 

  • 13:14 PM

    Karnataka Budget 2022 Live: ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ

    ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ, ಬೆಳಕು ಕಾರ್ಯಕ್ರಮದಡಿ 98 ಸಾವಿರ ಮನೆಗೆ ವಿದ್ಯುತ್, ವಿದ್ಯುತ್ ಸರಬರಾಜು ನಿಗಮಗಳ ಪುನರ್ ರಚನೆಗೆ ಯೋಜನೆ ರೂಪಿಸಲಾಗಿದೆ. ಆಸ್ತಿ ಹಣ ಗಳಿಕೆ, ಆರ್ಥಿಕ ಸ್ವಾವಲಂಬನೆ ಹಾಗೂ ಸಂಪನ್ಮೂಲ ಕ್ರೋಡೀಕರಣಕ್ಕೆ ತಜ್ಞರ ಸಮಿತಿ ರಜನೆ ಮಾಡಲಾಗುವುದು. ನಿರಂತರವಾಗಿ ವಿದ್ಯುತ್ ಸರಬರಾಜಿಗೆ ಉಪಕೇಂದ್ರ, ಕೆಪಿಟಿಸಿಎಲ್ ವತಿಯಿಂದ 64 ಹೊಸ ಉಪಕೇಂದ್ರ, 10 ಸಾವಿರ ಸೌರಶಕ್ತಿ ನೀರಾವರಿ ಪಂಪ್‌ಸೆಟ್ ಹಾಗೂ  227 ಕೋಟಿ ರೂಪಾಯಿ ವೆಚ್ಚದಲ್ಲಿ ಸೌರಶಕ್ತಿ ಪಂಪ್‌ಸೆಟ್ ನೀಡಲಾಗುವುದು - ಸಿಎಂ ಬೊಮ್ಮಾಯಿ 

  • 13:11 PM

    Karnataka Budget 2022 Live: ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

    2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಳು. ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ ನೀಡಲಾಗುತ್ತಿದೆ. ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಉಯೋಜನೆ ರೂಪಿಸಲಾಗಿದೆ. ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ - ಸಿಎಂ ಬೊಮ್ಮಾಯಿ 

  • 13:08 PM

    Karnataka Budget 2022 Live: ಆಶಾ ಕಾರ್ಯಕರ್ತರ ಗೌರವಧನ ಏರಿಕೆ

    11 ಕೋಟಿ ರೂ. ವೆಚ್ಚದಲ್ಲಿ ಸಂಚಾರಿ ಕ್ಲಿನಿಕ್‌ ಆರಂಭ ಮಾಡಲಾಗುವುದು. ದ್ವಿತಳಿ ರೇಷ್ಮೆ ಗೂಡಿಗೆ 10 ಸಾವಿರ ಪ್ರೋತ್ಸಾಹ ಧನ, ತುರ್ತು ವೈದ್ಯಕೀಯ ಸೇವೆಗೆ ಏರ್‌ ಆ್ಯಂಬುಲೆನ್ಸ್‌ ಸೇವೆ, ಆಶಾ ಕಾರ್ಯಕರ್ತರ ಗೌರವಧನ 1 ಸಾವಿರ ರೂ. ಏರಿಕೆ ಮಾಡಲಾಗಿದೆ - ಸಿಎಂ ಬೊಮ್ಮಾಯಿ
     

  • 13:07 PM

    Karnataka Budget 2022 Live:  ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ

    ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ. 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.  ರಾಜ್ಯದಲ್ಲಿ ನೂತನ KSRP ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದೆ.  1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇನ್ನು ದಾವಣಗೆರೆಯಲ್ಲಿ SDRF ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ, ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ - ಸಿಎಂ ಬೊಮ್ಮಾಯಿ 

  • 13:05 PM

    Karnataka Budget 2022 Live: 33 ಲಕ್ಷ ರೈತರಿಗೆ ಕೃಷಿ ಸಾಲ 

    33 ಲಕ್ಷ ರೈತರಿಗೆ ಕೃಷಿ ಸಾಲ ನೀಡಲಾಗುತ್ತದೆ. ಕೃಷ್ಣ ಮೇಲ್ದಂಡೆಗೆ 5 ಸಾವಿರ ಕೋಟಿ ಅನುದಾನ. ಭದ್ರಾ ಮೇಲ್ದಂಡೆಗೆ ಯೋಜನೆಗೆ ಕೇಂದ್ರದ ನೆರವು. ಮೀನುಕೃಷಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು.
    ಆಳಸಮುದ್ರ ಮೀನುಗಾರಿಕೆಗಯ ಸಾಮರ್ಥ್ಯ ವೃದ್ಧಿಗೆ ಆದ್ಯತೆ. ಒಂದು ಸಾವಿರ ಆಳ ಸಮುದ್ರ ಮೀನುಗಾರಿಕಾ ಬೋಟ್ ವಿತರಣೆಗೆ ಯೋಜನೆ. ಮೀನುಗಾರಿಗೆ ಆದ್ಯತೆ ಮೇರೆಗೆ ಮನೆಗಳ ನಿರ್ಮಾಣ ರಾಜ್ಯ ಸರ್ಕಾರದಿಂದ ಮೀನುಕೃಷಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ - ಸಿಎಂ ಬೊಮ್ಮಾಯಿ 

  • 13:02 PM

    Karnataka Budget 2022 Live: ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳವಾದ ಬಜೆಟ್ ಗಾತ್ರ 

    ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳ.  ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆಗೆ ಆದ್ಯತೆ. ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ, ಪಾಲುದಾರಿಕೆಯೊಂದಿಗೆ ಅಭಿವೃದ್ಧಿ,  ನವಭಾರತಕ್ಕಾಗಿ ನವ ಕರ್ನಾಟಕ, ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟಕ್ಕೆ ಈ ಬಾರಿ ಬಜೆಟ್ ನಲ್ಲಿ ಒಟ್ಟು ನೀಡಲಾಗಿದೆ. 

  • 12:57 PM

    Karnataka Budget 2022 Live: ಬಜೆಟ್ ಗಾತ್ರ - 2,65,720 ಕೋಟಿ ರೂ.

    ಆರ್ಥಿಕ ಅಭಿವೃದ್ಧಿ ಗೆ ಉತ್ತೇಜನ 55,657 ಕೋಟಿ ರೂ.

    ಬೆಂಗಳೂರು ಸಮಗ್ರ ಅಭಿವೃದ್ಧಿ 8,409 ಕೋಟಿ ರೂ. 

    ಕೃಷಿ ಮತ್ತು ಪೂರಕ ಚಟುವಟಿಕೆಗಳು 33,700 ಕೋಟಿ ರೂ.

    ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ 68,479 ಕೋಟಿ ರೂ. 

    ಎಸ್ ಸಿ ಎಸ್ ಪಿ/ಟಿಎಸ್ ಪಿಗೆ ಆಯವ್ಯಯದಲ್ಲಿ 28,234 ಕೋಟಿ ರೂ.

    ಆರೋಗ್ಯ, ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ 6,329 ಕೋಟಿ ರೂ.

    ಬಜೆಟ್ ಗಾತ್ರ - 2,65,720 ಕೋಟಿ ರೂ.

  • 12:43 PM

    Karnataka Budget 2022 Live: ಮೂರು 'E' ಗಳೊಂದಿಗೆ ರಾಜ್ಯದ ಅಭಿವೃದ್ಧಿ 

    ಮೂರು 'E' ಗಳೊಂದಿಗೆ ರಾಜ್ಯದ ಅಭಿವೃದ್ಧಿ ತಂತ್ರ ಹೆಣೆದ ಸಿಎಂ. ಮೂರು 'E' ಗಳೊಂದಿಗೆ ರಾಜ್ಯದ ಅಭಿವೃದ್ಧಿ- ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಒತ್ತು. ರಾಜ್ಯದ ಅಭಿವೃದ್ಧಿಗೆ ಕಾರ್ಯತಂತ್ರ ರೂಪಿಸಲಾಗಿದೆ. ಅತಿವೃಷ್ಟಿಯಿಂದ ಅಪಾರ ಹಾನಿಯುಂಟಾಗಿದೆ - ಸಿಎಂ ಬೊಮ್ಮಾಯಿ

  • 12:43 PM

    Karnataka Budget 2022 Live: ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ ರೂ. ಮೀಸಲು 

    ಕೆರೆಗಳ ಅಭಿವೃದ್ಧಿಗೆ 500 ಕೋಟಿ: ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ ರೂಪಾಯಿತಾಲೂಕುಗಳ ಅಭಿವೃದ್ದಿಗೆ 3 ಸಾವಿರ ಕೋಟಿ ರೂಪಾಯಿಹೊಸ ರೀತಿಯಲ್ಲಿ 7 ವಿಶ್ವ ವಿದ್ಯಾಲಯಗಳ ಸ್ಥಾಪನೆ

    ಬಜೆಟ್ ಗಾತ್ರ ಹೆಚ್ಚಳ: ರಾಜ್ಯ ಬಜೆಟ್ ಗಾತ್ರ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಳಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮಹೊಸ ಚಿಂತನೆ, ಹೊಸ ಚೈತನ್ಯದೊಂದಿಗೆ ಅಭಿವೃದ್ಧಿಗೆ ಒತ್ತು

    ಬೆಂಗಳೂರಿಗೆ 8,409 ಕೋಟಿ: ವಸತಿ ರಹಿತರಿಗೆ 5 ಸಾವಿರ ಮನೆಗಳ ವಿತರಣೆಬೆಂಗಳೂರಿಗೆ 8409 ಕೋಟಿ ರೂಪಾಯಿ ಅನುದಾನರಾಜ್ಯ ಸರ್ಕಾರದ ರೈತ ಶಕ್ತಿ ಹೊಸ ಯೋಜನೆ ಘೋಷಣೆ2 ಉದ್ಯಮಗಳಿಂದ ಬಂಡವಾಳ ಹಿಂತೆಗೆತಕ್ಕೆ ನಿರ್ಧಾರ

  • 12:41 PM

    ಶಿಕ್ಷಣ, ಉದ್ಯೋಗ, ದುರ್ಬಲ ವರ್ಗದವರ ರಕ್ಷಣೆಯ ಮಂತ್ರ ಜಪಿಸಿದ ಸಿಎಂ. ಕೃಷಿಗೆ 33,700 ಕೋಟಿ ಮೀಸಲಿಡಲಾಗುವುದು ಎಂದು ಸಿಎಂ ಹೇಳಿದರು. 

  • 12:38 PM

    Karnataka Budget 2022 Live: ಸಿಎಂ ಬೊಮ್ಮಾಯಿ ಬಜೆಟ್ ಭಾಷಣ 

    ಮೋದಿ ಅವರ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯುತ್ತಿದ್ದೇವೆ. ಕೋವಿಡ್ ನಡುವೆಯೂ ರಾಜ್ಯ ಪ್ರಗತಿಯತ್ತ ಮುನ್ನಡೆಯುತ್ತಿದೆ. ವಿವಿಧ ಇಲಾಖೆಗಳ ಸಹಕಾರದಿಂದ ಕೋವಿಡ್ ನಿಯಂತ್ರಣ ಸಾಧ್ಯವಾಗಿದೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಬೊಮ್ಮಾಯಿ ಹೇಳಿದರು.

  • 12:37 PM

    ಬಜೆಟ್ ಅಧಿವೇಶನ ಆರಂಭವಾಗಿದ್ದು, ಸಿಎಂ ಬೊಮ್ಮಾಯಿ ಆಯವ್ಯಯ ಮಂಡಿಸುತ್ತಿದ್ದಾರೆ. ಬಜೆಟ್ ನಲ್ಲಿ ನಾಲ್ಕು ವಿಭಾಗಗಳನ್ನು ಮಾಡಲಾಗಿದೆ. 

  • 12:32 PM

    ಮುಖ್ಯಮಂತ್ರಿ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ.  

  • 12:17 PM

    Karnataka Budget 2022 Live: ಸಚಿವ ಸಂಪುಟ ಸಭೆ ಆರಂಭ

    ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಮಂತ್ರಿ ಪರಿಷತ್ ಸಭೆ ಆರಂಭವಾಗಿದೆ. ಬಜೆಟ್ ಗೆ ಈ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಲಿದೆ. ಸಭೆ ಬಳಿಕ ವಿಧಾನಸಭೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ. 

  • 12:12 PM

    ಇಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ಮಂಡಿಸಲಿದ್ದು, ಬಜೆಟ್ ಫೈಲ್ ಜೊತೆಗೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ.  

  • 12:03 PM

    ವಿಧಾನಸೌಧದ ಮೇಲೆ ಲಘು ವಿಮಾನ ಹಾರಾಟ ಮಾಡಲಾಯಿತು. ಬಜೆಟ್ 2022 ಎಂಬ ಬಾವುಟ ಹೊತ್ತ ವಿಮಾನ ವಿಧಾನಸೌಧದ ಮೇಲೆ ಹಾರಿತು. "Thinking the state newer heights" ಎಂಬ ಬಾವುಟ ಹಾರಿಸಿಕೊಂಡು ಲಘು ವಿಮಾನ ಹಾರಾಟ ಮಾಡಿತು. 

  • 11:52 AM

    ಸಿಎಂ ಚೊಚ್ಚಲ ಬಜೆಟ್ ಗೆ ಕುಟುಂಬ ವರ್ಗದವರ ಸಾಥ್ ನೀಡಲಿದ್ದಾರೆ. ಬೊಮ್ಮಾಯಿ ಪತ್ನಿ, ಮಗ, ಮಗಳು ಸೇರಿದಂತೆ ಕುಟುಂಬ ವರ್ಗದವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. 

  • 11:15 AM

    ಬಜೆಟ್ ಪ್ರತಿ ಹಸ್ತಾಂತರ: ಸಿಎಂ ಬಸವರಾಜ ಬೊಮ್ಮಾಯಿಗೆ ಸೂಟ್​​ಕೇಸ್​ನಲ್ಲಿ ಬಜೆಟ್ ಪ್ರತಿ ಹಸ್ತಾಂತರ ಮಾಡಲಾಗಿದೆ. ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಐಎನ್ ಎಸ್ ಪ್ರಸಾದ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಬಜೆಟ್ ಪ್ರತಿ ಹಸ್ತಾಂತರ ಮಾಡಿದರು. ಈ ವೇಳೆ ಹಣಕಾಸು ಇಲಾಖೆಯ ಇತರ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

  • 11:15 AM

    ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿದ ಸಿಎಂ ಬೊಮ್ಮಾಯಿ ಪೌರಕಾರ್ಮಿಕರ ಕಷ್ಟ-ಸುಖ ಆಲಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪೌರಕಾರ್ಮಿಕರ ಜೊತೆ ಮಾತುಕತೆ ನಡೆಸಿದರು. ಇದೆ ವೇಳೆ ಪೌರಕಾರ್ಮಿಕ ಮಹಿಳೆಯರ ಜೊತೆ ಫೋಟೋ ತೆಗೆಸಿಕೊಂಡರು. 

  • 10:36 AM

    ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ : ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿ, ರಾಜ್ಯದ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದರು. 

    Srikantheshwara Temple

Trending News