200 ರೂಪಾಯಿ ಅಲ್ಲ ಗ್ಯಾಸ್ ಸಿಲಿಂಡರ್ ಮೇಲೆ 400 ರೂಪಾಯಿ ದರ ಕಡಿತ ! ಯಾರಿಗೆ ಈ ಲಾಭ ?

LPG Gas Cylinder Price :ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ನಿರಂತರ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅದರಂತೆ ಈಗ ಗ್ಯಾಸ್ ಸಿಲಿಂಡರ್ ದರವನ್ನು ಕೂಡಾ ಕಡಿಮೆ ಮಾಡಿದೆ. 

Written by - Ranjitha R K | Last Updated : Aug 30, 2023, 09:01 AM IST
  • ಗ್ಯಾಸ್ ಸಿಲಿಂಡರ್‌ಗಳ ಮೇಲಿನ ದರವನ್ನು ಕಡಿತ
  • ಗೃಹಬಳಕೆದಾರರಿಗೆ ಗ್ಯಾಸ್ ಸಿಲಿಂಡರ್ 200 ರೂಪಾಯಿ ಅಗ್ಗ
  • 903 ರೂಪಾಯಿಗೆ ಸಿಲಿಂಡರ್
200 ರೂಪಾಯಿ ಅಲ್ಲ ಗ್ಯಾಸ್ ಸಿಲಿಂಡರ್ ಮೇಲೆ 400 ರೂಪಾಯಿ ದರ ಕಡಿತ ! ಯಾರಿಗೆ ಈ ಲಾಭ ?  title=

LPG Gas Cylinder Price : ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ನಿರಂತರ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈರುಳ್ಳಿಗೆ ರಫ್ತು ಸುಂಕವನ್ನು ವಿಧಿಸಿದ ನಂತರ, ಸರ್ಕಾರ ಈಗ ಗ್ಯಾಸ್ ಸಿಲಿಂಡರ್‌ಗಳ ಮೇಲಿನ ದರವನ್ನು ಕಡಿತ ಮಾಡಿದೆ. ಸರ್ಕಾರದ ನಿರ್ಧಾರದ ನಂತರ ಈಗ ಎಲ್ಲಾ ಗೃಹಬಳಕೆದಾರರಿಗೆ ಗ್ಯಾಸ್ ಸಿಲಿಂಡರ್ 200 ರೂಪಾಯಿ ಅಗ್ಗವಾಗಿ ಸಿಗಲಿದೆ. ಇದಲ್ಲದೇ ಉಜ್ವಲ ಯೋಜನೆಯಡಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಸರ್ಕಾರ ಉಚಿತವಾಗಿ ನೀಡಲಿದೆ.

903 ರೂಪಾಯಿಗೆ ಸಿಲಿಂಡರ್ : 
ಸರ್ಕಾರದ ಈ ಹೆಜ್ಜೆಯನ್ನು ಚುನಾವಣಾ ಸಿದ್ಧತೆ ಎಂದೇ ಪರಿಗಣಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳವಾರ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 200 ರೂ. ಕಡಿತಗೊಳಿಸಿದೆ. 

ಇದನ್ನೂ ಓದಿ : ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ, ರಕ್ಷಾ ಬಂಧನ ಹಬ್ಬಕ್ಕೆ ಮೋದಿ ಸರ್ಕಾರದ ವತಿಯಿಂದ ಸಹೋದರಿಯರಿಗೆ ಉಡುಗೊರೆ!

ಯಾರಿಗೆ ಸಿಗಲಿದೆ. 400 ರೂ. ಕಡಿಮೆ ದರದಲ್ಲಿ ಎಲ್ ಪಿಜಿ : 
ಸರ್ಕಾರವು ಸಿಲಿಂಡರ್‌ ಮೇಲೆ  200ರೂಪಾಯಿ ಕಡಿತಗೊಳಿಸಿದ ನಂತರ, ಉಜ್ವಲ ಯೋಜನೆಯ ಫಲಾನುಭವಿಗಳು ಒಟ್ಟು 400 ರೂ. ಲಾಭವನ್ನು ಪಡೆಯುತ್ತಾರೆ. ಅವರಿಗೆ ಸರ್ಕಾರ ಈಗಾಗಲೇ 200 ರೂ.  ಸಬ್ಸಿಡಿ ನೀಡುತ್ತಿದೆ. ಈಗ ಮತ್ತೆ ಸಿಲಿಂಡರ್ ದರ 200 ರೂಪಾಯಿ ಕಡಿಮೆ ಮಾಡಿದ ನಂತರ  ಉಜ್ವಲ ಫಲಾನುಭವಿಗಳಿಗೆ 400 ರೂಪಾಯಿ ಕಡಿಮೆ ದರದಲ್ಲಿ ಸಿಲಿಂಡರ್ ದೊರೆಯಲಿದೆ. 

75 ಲಕ್ಷ ಕುಟುಂಬಗಳು ಉಜ್ವಲ ಯೋಜನೆಯ ಕನೆಕ್ಷನ್ ಪಡೆದ ನಂತರ ಹೊಸ ಫಲಾನುಭವಿಗಳ ಸಂಖ್ಯೆ 10.35 ಕೋಟಿಗೆ ಏರಲಿದೆ. ಈ ನಡವೆ, ಹೆಚ್ಚುತ್ತಿರುವ ಹಣದುಬ್ಬರಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಮಧ್ಯಪ್ರದೇಶದಲ್ಲಿ ಸರಕಾರ ಅಧಿಕಾರಕ್ಕೆ ಬಂದರೆ 500 ರೂಪಾಯಿಗೆ ಎಲ್ ಪಿಜಿ ನೀಡುವುದಾಗಿ ಭರವಸೆ ನೀಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಕೂಡಾ ಅದೇ ಬೆಲೆಗೆ ಎಲ್ಪಿಜಿ ನೀಡುತ್ತಿದೆ. ನವೆಂಬರ್-ಡಿಸೆಂಬರ್‌ನಲ್ಲಿ ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ, ಈ ನಿರ್ಧಾರವನ್ನು ಚುನಾವಣೆಯೊಂದಿಗೆ ಜೋಡಿಸಲು ಠಾಕೂರ್ ನಿರಾಕರಿಸಿದ್ದಾರೆ. ಓಣಂ ಮತ್ತು ರಕ್ಷಾ ಬಂಧನದ ಸಂದರ್ಭದಲ್ಲಿ ಮಹಿಳೆಯರಿಗೆ ಮೋದಿ  ಸರ್ಕಾರ ನೀಡಿದ ಉಡುಗೊರೆ ಇದಾಗಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಶ್ರಾವಣ ಮಂಗಳವಾರ ಇಳಿಕೆ ಕಂಡಿದೆಯೇ ಚಿನ್ನದ ದರ? 10 ಗ್ರಾಂ ಅಪರಂಜಿ ಚಿನ್ನದ ದರ ಎಷ್ಟಿದೆ ತಿಳಿಯಿರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News