Gruhalakshmi Yojana Latest News: ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎನ್ನುವ ಪರಿಸ್ಥಿತಿ ಇತ್ತು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ತಿಂಗಳ ಹಣಕ್ಕಾಗಿ ಬ್ಯಾಂಕ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳಿಗೆ ಅಲೆದಾಡುತ್ತಿದ್ದರು. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಆದಷ್ಟು ಬೇಗ ‘ಗೃಹಲಕ್ಷ್ಮೀ ಹಣ’ ಬಂದೇ ಬರುತ್ತೆ ಎನ್ನುವ ಖಚಿತ ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಎರಡ್ಮೂರು ತಿಂಗಳ ಬಾಕಿ ಹಣಕ್ಕೆ ಬೀಳುತ್ತಾ ಕತ್ತರಿ? 
ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲದಿರುವುದರಿಂದ ಮುಂದಿನ ಸಲ ಫಲಾನುಭವಿಗಳಿಗೆ ಹಣ ಹಾಕುವಾಗ ಬಾಕಿ ಹಣವನ್ನು ಉಳಿಸಿಕೊಂಡು ಆ ತಿಂಗಳ ಹಣವನ್ನು ಮಾತ್ರವೇ ಹಾಕಲಾಗುತ್ತೆ ಎನ್ನುವ ವದಂತಿ ಕೂಡ ಕೇಳಿಬಂದಿತ್ತು. ಈ ಬಗ್ಗೆ  ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ‘ಎಷ್ಟು ತಿಂಗಳಿಂದ ಬಾಕಿ ಉಳಿಸಿಕೊಳ್ಳಲಾಗಿರುತ್ತದೆಯೋ ಅಷ್ಟೂ ಹಣ ಬಂದೇ ಬರುತ್ತದೆ, ‘ಇದು ಸತ್ಯ’ ಎಂದು ಹೇಳಿದ್ದಾರೆ. 


ಹಿಂದೆ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲವೆಂದು ಅಲೆದಾಡುವುದು ಬೇಡ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದರು. ಅವರು ಹೇಳಿದ ಮೇಲೂ ಹಣ ಬಿಡುಗಡೆ ಆಗಿರಲಿಲ್ಲ. ಇದರಿಂದ ಸಹಜವಾಗಿ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಗೊಂದಲವನ್ನು ಸ್ಪಷ್ಟಪಡಿಸಿರುವ ಸಚಿವರು ‘ಗೃಹಲಕ್ಷ್ಮೀ ಹಣ’ ಬಂದೇ ಬರುತ್ತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ- ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಅಪ್ಲೈ ಮಾಡಿದ್ರೆ ತಿಂಗಳಿಗೆ ಖಾತೆ ಸೇರುತ್ತೆ 3000 ರೂ.


ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯಾಗುವುದು ತಡವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ವ್ಯಾಪಕವಾದ ಟೀಕೆಗಳು ಕೇಳಬರತೊಡಗಿವೆ. ಇದೇ ಹಿನ್ನೆಲೆಯಲ್ಲಿ ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದರು. ಈಗ ಮತ್ತೊಮ್ಮೆ ಆದಷ್ಟು ಬೇಗ ಯೋಜನೆಯ ಹಣ ಬಾಕಿ ಸಮೇತ ಬಿಡುಗಡೆ ಆಗುವುದಾಗಿ ಹೇಳಿದ್ದಾರೆ. 


ಮೊದಲು ಗೌರಿ-ಗಣೇಶ ಹಬ್ಬದ ವೇಳೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಸಲು ಯೋಚಿಸಲಾಗಿತ್ತು. ಆದರೆ ಅಂದುಕೊಂಡಂತೆ ಆಗದೆ ಇನ್ನಷ್ಟು ತಡವಾಯಿತು. ಈಗ ಬೇಗ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂಬ ವಿಚಾರವನ್ನು ಸದ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಹೇಳಿದುವುದು ಫಲಾನುಭವಿಗಳಿಗೆ ಇದ್ದ ಆತಂಕವನ್ನು ದೂರ ಮಾಡಿದೆ. 


ಇದನ್ನೂ ಓದಿ- ಎಲೋನ್ ಮಸ್ಕ್‌ಗೆ ಪ್ರತಿಸ್ಪರ್ಧಿ ಆಗ್ತಾರಾ ಈ ಭಾರತೀಯ ಉದ್ಯಮಿ...!


ಇಂತಹ ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ: 
ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿರುವ ಜೊತೆಗೆ ಈ ಯೋಜನೆಯಿಂದ 2 ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರನ್ನು ಕೈಬಿಡಲಾಗುತ್ತದೆ. ಆದಾಯ ತೆರಿಗೆ ಪಾವತಿಸುವ ಹಾಗೂ ಜಿಎಸ್‌ಟಿ ಸಂಖ್ಯೆ ಹೊಂದಿರುವ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗುತ್ತದೆ. ಈಗಾಗಲೇ ಐಟಿ - ಜಿಎಸ್‌ಟಿ ಪಾವತಿದಾರರ ಪಟ್ಟಿ ಸಿದ್ಧವಾಗಿದ್ದು ಅದರ ಪ್ರಕಾರ 2 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. 


ರಾಜ್ಯದಲ್ಲಿ 1.28 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿದ್ದಾರೆ. ಇದರಲ್ಲಿ  ಸುಮಾರು 2 ಲಕ್ಷ ಮಹಿಳೆಯರು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಮತ್ತು ಕೆಲವರು ಕೆಲವು ವ್ಯವಹಾರಗಳನ್ನು ಮಾಡುತ್ತಾ ಜಿಎಸ್‌ಟಿ ಪಾವತಿ ಸಂಖ್ಯೆಯನ್ನು ಹೊಂದಿದ್ದಾರೆ. ಅರ್ಹರಿಗೆ ಮಾತ್ರವೇ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಬೇಕು ಎನ್ನುವ ಕಾರಣಕ್ಕೆ ಆದಾಯ ತೆರಿಗೆ ಪಾವತಿಸುವ ಹಾಗೂ ಜಿಎಸ್‌ಟಿ ಸಂಖ್ಯೆ ಹೊಂದಿರುವ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂದು ಇಲಾಖೆಯಿಂದ ತಿಳಿದುಬಂದಿತ್ತು. 


ಆಧಾರ್‌ ಲಿಂಕ್‌, ಬ್ಯಾಂಕ್‌ ಖಾತೆ ಜೋಡಣೆ ಮೊದಲಾದ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ ಕಾರಣದಿಂದ ಯೋಜನೆ ಹಣ ಬರದಿದ್ದರೆ ಅಪ್‌ಡೇಟ್‌ ಮಾಡಿಸಿಕೊಂಡ ಹಾಗೂ ಸಮಸ್ಯೆ ಬಗೆಹರಿದ ಕೂಡಲೇ ಅರ್ಹ ಫಾಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.