Pension Update: ಇಳಿಕೆಯಾಯ್ತು ಪೆನ್ಶನ್ ವಯಸ್ಸು! ಇನ್ಮುಂದೆ 50ನೇ ವಯಸ್ಸಿನಿಂದಲೇ ಪಿಂಚಣಿ ಪಡೆದುಕೊಳ್ಳಬಹುದು!

Pension Update: ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಹಿಳೆಯರಿಗೆ ಹಲವು ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದೀಗ ಜಾರ್ಖಂಡ್ ಸರ್ಕಾರ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ವೊಂದನ್ನು ಪ್ರಕಟಿಸಿದೆ. (Business News In Kannada)  

Written by - Nitin Tabib | Last Updated : Jan 16, 2024, 09:35 PM IST
  • ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಡಿಸೆಂಬರ್ 29 ರಂದು ರಾಜ್ಯದ ಆದಿವಾಸಿಗಳು ಮತ್ತು ದಲಿತರು
  • 50 ವರ್ಷ ವಯಸ್ಸನ್ನು ತಲುಪಿದ ನಂತರ ಪಿಂಚಣಿ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದ್ದಾರೆ.
  • ಇದಾದ ನಂತರ ಝಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಮುಂದಿನ ಸಭೆಯಲ್ಲಿ ಸಚಿವ ಸಂಪುಟದ ಪ್ರಸ್ತಾವನೆಗೆ ಅನುಮೋದನೆ ದೊರೆಯಲಿದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.
Pension Update: ಇಳಿಕೆಯಾಯ್ತು ಪೆನ್ಶನ್ ವಯಸ್ಸು! ಇನ್ಮುಂದೆ 50ನೇ ವಯಸ್ಸಿನಿಂದಲೇ ಪಿಂಚಣಿ ಪಡೆದುಕೊಳ್ಳಬಹುದು! title=

ಜಾರ್ಖಂಡ್: ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರಕಾರದ ವತಿಯಿಂದ ಮಹಿಳೆಯರಿಗೆ ಹಲವು ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಜಾರ್ಖಂಡ್ ಸರ್ಕಾರ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಪ್ರಕಟಿಸಿದೆ. ಮಹಿಳೆಯರಿಗೆ ಪಿಂಚಣಿ ಪಡೆಯುವ ವಯೋಮಿತಿಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಕಡಿತಗೊಳಿಸಲಿದೆ. ಇದರಿಂದ ರಾಜ್ಯದ ಮಹಿಳೆಯರು 50 ವರ್ಷದಿಂದಲೇ  ಪಿಂಚಣಿ ಪಡೆಯಲು ಪ್ರಾರಂಭಿಸಲಿದ್ದಾರೆ. (Business News In Kannada)

ಪ್ರಸ್ತುತ ರಾಜ್ಯದಲ್ಲಿ ಎಲ್ಲಾ ವರ್ಗದ ಮಹಿಳೆಯರು ತಮ್ಮ 60ನೇ ವಯಸ್ಸಿನಿಂದ ಪಿಂಚಣಿ ಪಡೆಯುತ್ತಿದ್ದಾರೆ. ಇದೇ ವೇಳೆ, ಶೀಘ್ರದಲ್ಲೇ ಕೆಲವು ವಿಶೇಷ ಮಹಿಳೆಯರು 50 ವರ್ಷದಿಂದ ಪಿಂಚಣಿ ಪಡೆಯಲು ಆರಂಭಿಸಲಿದ್ದಾರೆ. ಅಧಿಕಾರಿಯೊಬ್ಬರು ಮಂಗಳವಾರ ಈ ಮಾಹಿತಿ ನೀಡಿದ್ದಾರೆ.

50 ನೇ ವಯಸ್ಸಿನಲ್ಲಿ ಯಾವ ಮಹಿಳೆಯರು ಪಿಂಚಣಿ ಸಿಗಲಿದೆ?
ಈ ಕುರಿತು ಪ್ರಸ್ತಾವನೆ ಅಂತಿಮ ಹಂತದಲ್ಲಿದೆ ಎಂದು ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಸಾಮಾಜಿಕ ಭದ್ರತಾ ಇಲಾಖೆಯ ಕಾರ್ಯದರ್ಶಿ ಕೃಪಾ ನಂದ್ ಝಾ ತಿಳಿಸಿದ್ದಾರೆ. ಪ್ರಸ್ತಾವನೆಯ ಅಡಿಯಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯರಿಗೆ ಪಿಂಚಣಿ ಪಡೆಯಲು ವಯಸ್ಸಿನ ಮಿತಿ 50 ವರ್ಷಗಳಾಗಿರಲಿದೆ.

ಇದನ್ನೂ ಓದಿ-Union Budget 2024: ಈ ಬಾರಿಯ ಬಜೆಟ್ ನಲ್ಲಿ ಮಹಿಳೆಯರಿಗೆ ಸಿಗಲಿದೆಯಾ ಈ ಸಂತಸದ ಸುದ್ದಿ?

ಮುಂದಿನ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗುವುದು
ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಡಿಸೆಂಬರ್ 29 ರಂದು ರಾಜ್ಯದ ಆದಿವಾಸಿಗಳು ಮತ್ತು ದಲಿತರು 50 ವರ್ಷ ವಯಸ್ಸನ್ನು ತಲುಪಿದ ನಂತರ ಪಿಂಚಣಿ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದ್ದಾರೆ. ಇದಾದ ನಂತರ ಝಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಮುಂದಿನ ಸಭೆಯಲ್ಲಿ ಸಚಿವ ಸಂಪುಟದ ಪ್ರಸ್ತಾವನೆಗೆ ಅನುಮೋದನೆ ದೊರೆಯಲಿದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ-Union Budget 2024: ವೇತನ ಪಡೆಯುವ, ಪಡೆಯದೆ ಇರುವವರಿಗೊಂದು ಗುಡ್ ನ್ಯೂಸ್, ಮನೆ ಬಾಡಿಗೆ ಭತ್ಯೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ!

18 ಲಕ್ಷ ಫಲಾನುಭವಿಗಳು ಪ್ರಯೋಜನ ಸಿಗಲಿದೆ
ಇದು ಜಾರಿಯಾದ ನಂತರ ಜಾರ್ಖಂಡ್‌ನಲ್ಲಿ ಹೆಚ್ಚುವರಿ 18 ಲಕ್ಷ ಫಲಾನುಭವಿಗಳು ಪಿಂಚಣಿ ಯೋಜನೆಗೆ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 35.68 ಲಕ್ಷ ಫಲಾನುಭವಿಗಳು ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಝಾ ತಿಳಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಪಿಂಚಣಿದಾರರ ಸಂಖ್ಯೆ ಶೇಕಡಾ 82 ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News