ಮೂಲವೇತನದೊಂದಿಗೆ 53% ತುಟ್ಟಿಭತ್ಯೆ ವಿಲೀನ !ಸರ್ಕಾರಿ ನೌಕರರ ವೇತನದಲ್ಲಿ ಆಗುವುದು ಬಹು ದೊಡ್ಡ ಬದಲಾವಣೆ

ಈ ಹಿಂದೆ ತುಟ್ಟಿಭತ್ಯೆ ಶೇ 50 ದಾಟಿದಾಗ ಆರನೇ ವೇತನ ಆಯೋಗದಲ್ಲೂ ಈ ಶಿಫಾರಸು ಮಾಡಲಾಗಿತ್ತು.ಇದೀಗ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.  

Written by - Ranjitha R K | Last Updated : Nov 11, 2024, 11:05 AM IST
  • ಡಿಎ ಈಗ ಮೂಲ ವೇತನದೊಂದಿಗೆ ವಿಲೀನಗೊಳ್ಳಲಿದೆಯೇ
  • ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಬದಲಾವಣೆ
  • ವೇತನದ ಮೇಲಾಗುವುದು ನೇರ ಪರಿಣಾಮ
ಮೂಲವೇತನದೊಂದಿಗೆ 53% ತುಟ್ಟಿಭತ್ಯೆ ವಿಲೀನ !ಸರ್ಕಾರಿ ನೌಕರರ ವೇತನದಲ್ಲಿ ಆಗುವುದು ಬಹು ದೊಡ್ಡ ಬದಲಾವಣೆ

ಬೆಂಗಳೂರು : ದೀಪಾವಳಿಗೂ ಮುನ್ನ ಕೇಂದ್ರ ನೌಕರರಿಗೆ ಭರ್ಜರಿ ಉಡುಗೊರೆ ಸಿಕ್ಕಿದ್ದು, ಅವರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಸರ್ಕಾರವು ಡಿಎ ಮತ್ತು ಡಿಆರ್ ಎರಡನ್ನೂ ಶೇ 3 ರಷ್ಟು ಅಂದರೆ ಶೇ. 50 ರಿಂದ 53 ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದೊಂದಿಗೆ, ಡಿಎ ಈಗ ಮೂಲ ವೇತನದೊಂದಿಗೆ ವಿಲೀನಗೊಳ್ಳಲಿದೆಯೇ ಎಂಬ ಚರ್ಚೆ ಹುಟ್ಟಿಕೊಂಡಿದೆ. ಇದೇ ವೇಳೆ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಬದಲಾವಣೆ ಕಾಣಲಿದೆ. 

Add Zee News as a Preferred Source

ತುಟ್ಟಿಭತ್ಯೆಯನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸುವುದೇ? : 
ಅಕ್ಟೋಬರ್ 16 ರಂದು, ಕೇಂದ್ರ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 3 ರಷ್ಟು ಹೆಚ್ಚಿಸಲಾಯಿತು. ಈ ಮೂಲಕ ಸರ್ಕಾರಿ ನೌಕರರ ಡಿಎಯನ್ನು ಶೇಕಡಾ 50 ರಿಂದ 53 ಕ್ಕೆ ಹೆಚ್ಚಿಸಲಾಯಿತು. ಇದಾದ ಬಳಿಕ ತುಟ್ಟಿಭತ್ಯೆಯನ್ನು ಮೂಲ ವೇತನಕ್ಕೆ ಸೇರಿಸಬೇಕು ಎಂಬ ಚರ್ಚೆ ಆರಂಭವಾಯಿತು. ಈ ಹಿಂದೆ ತುಟ್ಟಿಭತ್ಯೆ ಶೇ 50 ದಾಟಿದಾಗ ಆರನೇ ವೇತನ ಆಯೋಗದಲ್ಲೂ ಈ ಶಿಫಾರಸು ಮಾಡಲಾಗಿತ್ತು.ಇದೀಗ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಆದರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.   ಈ ಹಿಂದೆ, ಐದನೇ ಮತ್ತು ಆರನೇ ವೇತನ ಆಯೋಗದ ಅವಧಿಯಲ್ಲಿ, ತುಟ್ಟಿಭತ್ಯೆಯನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗಿತ್ತು. ಇದರ ಆಧಾರದ ಮೇಲೆ, 2004ರಲ್ಲಿ, 50 ಪ್ರತಿಶತ ಡಿಎಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಲಾಯಿತು. 

ಇದನ್ನೂ ಓದಿ : ಪಾತಾಳಕ್ಕೆ ಕುಸಿದ ಬಂಗಾರದ ಬೆಲೆ !ಇನ್ನು ಬಂಗಾರ ಬಲು ಅಗ್ಗ! ಚಿನ್ನದ ದರ ಇಳಿಕೆ ಹಿಂದಿರುವುದು ಡಾಲರ್ ಮಹಿಮೆ

ವೇತನದ ಮೇಲಾಗುವುದು ನೇರ ಪರಿಣಾಮ : 
ಪ್ರಸ್ತುತ, ಕೇಂದ್ರೀಯ ನೌಕರರು 53 ಪ್ರತಿಶತದಷ್ಟು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಇದನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಿದರೆ, ವೇತನ ರಚನೆಯಲ್ಲಿ ಶಾಶ್ವತ ಬದಲಾವಣೆಗಳಾಗುತ್ತವೆ.ಇದರ ಪರಿಣಾಮವು ಭತ್ಯೆಗಳು ಮತ್ತು ಪ್ರಯೋಜನಗಳ ಮೇಲೂ ಗೋಚರಿಸುತ್ತದೆ.ಸರ್ಕಾರ ಪ್ರಸ್ತುತ ಈ ವಿಲೀನದ ಕುರಿತು ಚಿಂತನೆ ನಡೆಸುತ್ತಿದೆ.ಯಾವುದೇ ನಿರ್ಧಾರ ಕೈಗೊಂಡಿಲ್ಲ. 

ಇದನ್ನೂ ಓದಿ :  Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆ, ಇಂದಿನ ದರ ಹೇಗಿದೆ ನೋಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News