ಈರುಳ್ಳಿಗೆ ಸಂಬಂಧಿಸಿದಂತೆ ಶ್ರೀಸಾಮಾನ್ಯರಿಗೆ ಸಂತಸದ ಸುದ್ದಿ ಪ್ರಕಟಿಸಿದ ಕೇಂದ್ರ ಸಚಿವೆ

Onion Auction Update: ಕೇಂದ್ರ ಸಚಿವೆ ಡಾ.ಭಾರತಿ ಪವಾರ್ ಅವರೊಂದಿಗೆ ಬುಧವಾರ ನಡೆದ ರೈತರು, ವರ್ತಕರು ಮತ್ತು ರಫ್ತುದಾರರ ಪ್ರತಿನಿಧಿಗಳ ಸಭೆಯಲ್ಲಿ ಈರುಳ್ಳಿ ಹರಾಜು ಪುನರಾರಂಭಿಸಲು ನಿರ್ಧರಿಸಲಾಗಿದೆ.  

Written by - Nitin Tabib | Last Updated : Aug 23, 2023, 11:12 PM IST
  • ಇದರೊಂದಿಗೆ ಈರುಳ್ಳಿ ರಫ್ತಿನ ಮೇಲೆ ಶೇ.40ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ
  • ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಪವಾರ್ ಭರವಸೆ ನೀಡಿದ್ದಾರೆ.
  • ಅವರು ನಾಸಿಕ್‌ನ ದಿಂಡೋರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ಈರುಳ್ಳಿಗೆ ಸಂಬಂಧಿಸಿದಂತೆ ಶ್ರೀಸಾಮಾನ್ಯರಿಗೆ ಸಂತಸದ ಸುದ್ದಿ ಪ್ರಕಟಿಸಿದ ಕೇಂದ್ರ ಸಚಿವೆ title=

ನವದೆಹಲಿ: ದೇಶದಾದ್ಯಂತ ಈರುಳ್ಳಿ ಉತ್ಪಾದನೆಗೆ ಹೆಸರುವಾಸಿಯಾಗಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ಮೂರು ದಿನಗಳ ನಂತರ ಗುರುವಾರದಿಂದ ಮತ್ತೊಮ್ಮೆ ಈರುಳ್ಳಿ ಹರಾಜು ಆರಂಭವಾಗಲಿದೆ. ಇದೀಗ ಪ್ರತಿಭಟನೆ ಹಿಂಪಡೆಯಲು ಈರುಳ್ಳಿ ವ್ಯಾಪಾರಿಗಳು ನಿರ್ಧರಿಸಿದ್ದಾರೆ. ಈರುಳ್ಳಿ ರಫ್ತಿಗೆ ಶೇ 40ರಷ್ಟು ಸುಂಕ ವಿಧಿಸುವುದನ್ನು ವ್ಯಾಪಾರಿಗಳು ವಿರೋಧಿಸಿದ್ದರು. ಈ ಕಾರಣದಿಂದ ಈರುಳ್ಳಿ ಬೆಳೆಯುವ ಜಿಲ್ಲೆಯ ಮಂಡಿಗಳಲ್ಲಿ ಸಗಟು ಮಾರಾಟಕ್ಕೆ ಹರಾಜು ಪ್ರಕ್ರಿಯೆ ಸ್ಥಗಿತಗೊಂಡಿತ್ತು.

ಮಾಹಿತಿ ನೀಡಿದ ಕೇಂದ್ರ ಸಚಿವೆ
ಕೇಂದ್ರ ಸಚಿವೆ ಡಾ.ಭಾರತಿ ಪವಾರ್ ಅವರೊಂದಿಗೆ ಬುಧವಾರ ನಡೆದ ರೈತರು, ವರ್ತಕರು ಮತ್ತು ರಫ್ತುದಾರರ ಪ್ರತಿನಿಧಿಗಳ ಸಭೆಯಲ್ಲಿ ಈರುಳ್ಳಿ ಹರಾಜು ಪುನರಾರಂಭಿಸಲು ನಿರ್ಧರಿಸಲಾಗಿದೆ.

ಹರಾಜು ಮತ್ತೆ ಆರಂಭಗೊಳ್ಳಲಿದೆ
ಸಭೆಯ ನಂತರ, ಈರುಳ್ಳಿ ವ್ಯಾಪಾರಿಗಳ ಪ್ರತಿನಿಧಿಯೊಬ್ಬರು ಹರಾಜು ನಿಲ್ಲಿಸುವ ನಿರ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರ ನಂತರ, ಗುರುವಾರದಿಂದ ನಾಸಿಕ್‌ನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ಈರುಳ್ಳಿ ಹರಾಜು ಪುನರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-ಮೋದಿ ಸರ್ಕಾರ ನೀಡುವ ಸಬ್ಸಿಡಿ ಪಡೆದು ಈ ಉದ್ಯಮ ಆರಂಭಿಸಿ, ಲಕ್ಷಾಂತರ ಆದಾಯ ಗಳಿಸಿ!

40 ರಷ್ಟು ಶುಲ್ಕ ಮರುಪರಿಶೀಲನೆ
ಇದರೊಂದಿಗೆ ಈರುಳ್ಳಿ ರಫ್ತಿನ ಮೇಲೆ ಶೇ.40ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಪವಾರ್ ಭರವಸೆ ನೀಡಿದ್ದಾರೆ. ಅವರು ನಾಸಿಕ್‌ನ ದಿಂಡೋರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಇದನ್ನೂ ಓದಿ-ನೀವೂ ಅತಿ ಹೆಚ್ಚು ಆನ್ಲೈನ್ ಶಾಪಿಂಗ್ ಮಾಡುತ್ತೀರಾ? ಹಾಗಾದ್ರೆ ಈ ಸುದ್ದಿ ತಪ್ಪದೆ ಓದಿ!

ದೊಡ್ಡ ಮಾರುಕಟ್ಟೆಗಳ ಹೆಸರುಗಳನ್ನು ಸಹ ಶಾಮೀಲುಗೊಳಿಸಲಾಗಿದೆ
ವ್ಯಾಪಾರಿಗಳ ಪ್ರತಿಭಟನೆಯಿಂದಾಗಿ ನಾಸಿಕ್‌ನ ಬಹುತೇಕ ಸಕ್ರಿಯ ಎಪಿಎಂಸಿಗಳಲ್ಲಿ ಈರುಳ್ಳಿ ಹರಾಜು ಸ್ಥಗಿತಗೊಂಡಿತ್ತು. ಇವುಗಳಲ್ಲಿ ಲಾಸಲ್‌ಗಾಂವ್‌ನಲ್ಲಿ ಏಷ್ಯಾದ ಅತಿದೊಡ್ಡ ಈರುಳ್ಳಿ ಮಾರುಕಟ್ಟೆ ಕೂಡ ಶಾಮೇಲಾಗಿದೆ. ದೇಶೀಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, ಕೆಲವು ದಿನಗಳ ಹಿಂದೆ ಈರುಳ್ಳಿ ರಫ್ತಿನ ಮೇಲೆ ಶೇಕಡಾ 40 ರಷ್ಟು ಸುಂಕವನ್ನು ವಿಧಿಸಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News