ಬಳ್ಳಾರಿ: ಜಿಲ್ಲೆಯ ಗೃಹ ರಕ್ಷಕದಳದ “ಗೌರವ ಸಮಾದೇಷ್ಟರ” ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆಯ ನಿರ್ದೇಶಕರಾದ ಅಕ್ಷಯ್ ಎಂ.ಹಾಕೆ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಜಿಲ್ಲೆಯಲ್ಲಿ ಗೃಹರಕ್ಷಕದಳದ “ಗೌರವ ಸಮಾದೇಷ್ಟರ” ಖಾಲಿ ಇದ್ದು, ಅಭ್ಯರ್ಥಿಯನ್ನು ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ನಿಯಮನುಸಾರವಾಗಿ ಆಯ್ಕೆ ಮಾಡಲಾಗುತ್ತದೆ.


ಇದನ್ನೂ ಓದಿ- ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ


ಅರ್ಹತೆಗಳು:


ವಯೋಮಿತಿ 50 ವರ್ಷ ಒಳಗಿರಬೇಕು, ಪದವಿ ಪೂರ್ಣಗೊಳಿಸಿರಬೇಕು, ಯಾವುದೇ ರಾಜಕೀಯ ಪಕ್ಷಗಳ ಚಟುವಟಿಕೆಗಳಲ್ಲಿ ಪಾಲ್ಗೊಂಡಿರಬಾರದು, ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು, ಜಿಲ್ಲಾ ಮುಖ್ಯ ಕಚೇರಿಯ 20 ಕಿ.ಮೀ. ವ್ಯಾಪ್ತಿಯೊಳಗೆ ವಾಸವಿರಬೇಕು.


ಇದನ್ನೂ ಓದಿ- ಶೌಚಾಲಯವನ್ನು ಮಕ್ಕಳೇ ಸ್ವಚ್ಚಗೊಳಿಸಿದರೆ ತಪ್ಪಿಲ್ಲ, ಇದು ಶಿಕ್ಷಣದ ಒಂದು ಭಾಗ : ಯುಟಿ ಖಾದರ್


ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ದೈಹಿಕ ಮತ್ತು ಮಾನಸಿಕ ಸಧೃಡತೆ ಪ್ರಮಾಣ ಪತ್ರ ಪಡೆದಿರಬೇಕು. ಮತ್ತು ರೆಸಿಪಿಯೆಂಟ್ ಆಫ್ ಗ್ಯಾಲಂಟ್ರಿ ಪ್ರಶಸ್ತಿ, ಎನ್.ಸಿ.ಸಿ “ಸಿ” ಪ್ರಮಾಣ ಪತ್ರ, ಭಾರತೀಯ ಸೇನೆ, ಪ್ಯಾರ ಮಿಲ್ಟ್ರಿ ಸೇನೆ ಅಥವಾ ಪೋಲಿಸ್ ಇಲಾಖೆಗಳಲ್ಲಿ ಐದು ವರ್ಷ ಸೇವೆ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಸ್ವವಿವರದೊಂದಿಗೆ ಜ.30 ರ ಒಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.