ಧಾರವಾಡ : ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾ ಯೋಜನಾ ಅನ್ವಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವ ಲೆಕ್ಕಿಗ ಕಂ ಸಹಾಯಕ ಸ್ಥಾನಕ್ಕೆ ಸಿಬ್ಬಂದಿಯನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಧಾರವಾಡ ವಿಭಾಗದ ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯ ಅಕ್ಷಯ ಪಾರ್ಕನ ಕಾರ್ಮಿಕ ಭವನ ಸಹಾಯಕ ಆಯುಕ್ತರ ಕಚೇರಿ ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆದು ಫೆಬ್ರವರಿ 28 ರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬೇಕು.


ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?


ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಿ. ಕಾಂ ಪದವಿಯನ್ನು ಪಡೆದಿರಬೇಕು, ಆಕೌಟೆಂಟ್ ಹುದ್ದೆಯಲ್ಲಿ ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಮಾತನಾಡಲು ಹಾಗೂ ಉತ್ತಮ ಬರವಣಿಗೆಯ ಕೌಶಲ್ಯವನ್ನು ಹೊಂದಿರಬೇಕು, ಕಂಪ್ಯೂಟರ್ (ಎಮ್.ಎಸ್.ಆಫೀಸ್, ಟ್ಯಾಲಿ, ಇಂಟರ್ನೆಟ್ ಆಪರೇಶನ್) ಜ್ಞಾನವನ್ನು ಪಡೆದಿರಬೇಕು, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 40 ವಯಸ್ಸಿನ ಒಳಗಿರಬೇಕು.


ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://dharwad.nic.in ನಲ್ಲಿ ನೋಡಬಹುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಹಾಯಕ ಕಾಮೀಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.