ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2023-24ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಶಿಫ್ ತರಬೇತಿಗಾಗಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಡಿಸೆಂಬರ್ 05 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಇದೇ ಕಚೇರಿಯಲ್ಲಿ ಸಲ್ಲಿಸಬೇಕು.


ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡ ಪ್ಯಾಲಿಸ್ತೀನ್ ಬೆಂಬಲಿಗ


ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರುವರಿಗೆ ಆದ್ಯತೆ ನೀಡಲಾಗುತ್ತದೆ. ಈ ಮೊದಲು ಅಪ್ರೆಂಟಿಶಿಫ್ ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ.ಬಳ್ಳಾರಿ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಅಪ್ರೆಂಟಿಶಿಫ್ ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಜನವರಿ-2024 ರಿಂದ ಡಿಸೆಂಬರ್-2024ರವರೆಗೆ ಒಂದು ವರ್ಷದ ಅವಧಿಯಲ್ಲಿ ಪ್ರತಿ ಮಾಹೆ ತಲಾ 15ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು.


ಇದನ್ನೂ ಓದಿ: “ನನ್ನನ್ನು ಕರೆದಿಲ್ಲ… ವಿಶ್ವಕಪ್ ಫೈನಲ್ ಪಂದ್ಯ ನಾನು ನೋಡಲ್ಲ”- ಕ್ರಿಕೆಟ್ ದಿಗ್ಗಜ ಕಪಿಲ್ ದೇವ್


ಅರ್ಜಿ ನಮೂನೆ ಹಾಗೂ ಇನ್ನೀತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಕಚೇರಿ ಅಥವಾ ಮೊ9480841211 ಹಾಗೂ ಮೊ.9740116585ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು ಜಡಿಯಪ್ಪ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.