Career in KPCL: ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವತಿಯಿಂದ ಕುಡತಿನಿಯಲ್ಲಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ನಿಗದಿತ ಮಾಸಿಕ ವೇತನದೊಂದಿಗೆ ಒಂದು ವರ್ಷ ಅವಧಿ ಶಿಶಿಕ್ಷು ತರಬೇತಿ ನೀಡಲು ಅರ್ಹ ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Sep 19, 2024, 05:07 PM IST
  • ಅಭ್ಯರ್ಥಿಯು ಚಾಲ್ತಿಯಲ್ಲಿರುವ ಇ-ಮೇಲ್ ಐಡಿಯನ್ನು ಕಡ್ಡಾಯವಾಗಿ ಭರ್ತಿ ಮಾಡಿಬೇಕು. 18 ವರ್ಷ ವಯೋಮಿತಿ ಹೊಂದಿರಬೇಕು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಶಿಕ್ಷು ಕಾಯ್ದೆ ಪ್ರಕಾರ ಮೀಸಲಾತಿ ಇದ್ದು, ನಿಗಮದ ಉದ್ಯೋಗಿಗಳ ಮಕ್ಕಳಿಗೆ ಶೇ.25 ರಷ್ಟು ಮೀಸಲಾತಿ ಇರುತ್ತದೆ.
  • ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಜೊತೆಗೆ ಲಕೋಟೆ ಮೇಲೆ ಶಿಶಿಕ್ಷು ತರಬೇತಿಗಾಗಿ ಅರ್ಜಿ ಎಂದು ನಮೂದಿಸಿ ಕಚೇರಿಗೆ ಸಲ್ಲಿಸಬೇಕು.
Career in KPCL: ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಬಳ್ಳಾರಿ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವತಿಯಿಂದ ಕುಡತಿನಿಯಲ್ಲಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ನಿಗದಿತ ಮಾಸಿಕ ವೇತನದೊಂದಿಗೆ ಒಂದು ವರ್ಷ ಅವಧಿ ಶಿಶಿಕ್ಷು ತರಬೇತಿ ನೀಡಲು ಅರ್ಹ ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ವೃತ್ತಿಗನುಗುಣವಾಗಿ ಆನ್‌ಲೈನ್ ವೆಬ್‌ಸೈಟ್ www.apprenticeshipindia.org ಲಿಂಕ್ ಮುಖಾಂತರ ಅ.07 ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.

ಶಿಶಿಕ್ಷು ವೃತ್ತಿ ಸಂಖ್ಯೆ ಮತ್ತು ಶಿಷ್ಯವೇತನ:

ಐಟಿಐ ಕೋರ್ಸ್ನ ಪೂರ್ಣಗೊಳಿಸಿದ ಎಲೆಕ್ಟ್ರಿಷಿಯನ್-5, ಫಿಟ್ಟರ್-5, ಟರ್ನರ್-2, ವೆಲ್ಡರ್-3, ಕೊಪಾ-ಪಾಸಾ-7. ಶೈಕ್ಷಣಿಕ ಅರ್ಹತೆ ಪಡೆದವರಿಗೆ ನಿಗಮದ ವತಿಯಿಂದ 10,000 ರೂ. ಮಾಸಿಕ ಶಿಷ್ಯವೇತನ ನೀಡಲಾಗುತ್ತದೆ. ಹಾಗೂ ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡ ಎಫ್‌ಓಎ-4 (ಎಸ್‌ಎಸ್‌ಎಲ್‌ಸಿ ಮತ್ತು ಕಂಪ್ಯೂಟರ್) ಹೌಸ್ ಕೀಪರ್-15. ಶೈಕ್ಷಣಿಕ ಅರ್ಹತೆ ಪಡೆದವರಿಗೆ ನಿಗಮದ ವತಿಯಿಂದ 7,000 ರೂ. ಮಾಸಿಕ ಶಿಷ್ಯವೇತನ ನೀಡಲಾಗುತ್ತದೆ.

ಬೇಕಾದ ದಾಖಲೆಗಳು:

ಅಭ್ಯರ್ಥಿಯ ಹೆಸರು, ಆಧಾರ್ ಕಾರ್ಡ್ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ದೈಹಿಕಾ ಕ್ಷಮತಾ ಪತ್ರ, ಇತ್ತೀಚಿ ನಾಲ್ಕು ಭಾವಚಿತ್ರ, ಈ ಮೊದಲು ಶಿಶಿಕ್ಷÄ ತರಬೇತಿ ಪಡೆದಿದ್ದಲ್ಲಿ ದಾಖಲೆಯ ವಿವರದ ಪ್ರತಿ ಒದಗಿಸಬೇಕು.

ಅಭ್ಯರ್ಥಿಯು ಚಾಲ್ತಿಯಲ್ಲಿರುವ ಇ-ಮೇಲ್ ಐಡಿಯನ್ನು ಕಡ್ಡಾಯವಾಗಿ ಭರ್ತಿ ಮಾಡಿಬೇಕು. 18 ವರ್ಷ ವಯೋಮಿತಿ ಹೊಂದಿರಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಶಿಕ್ಷು ಕಾಯ್ದೆ ಪ್ರಕಾರ ಮೀಸಲಾತಿ ಇದ್ದು, ನಿಗಮದ ಉದ್ಯೋಗಿಗಳ ಮಕ್ಕಳಿಗೆ ಶೇ.25 ರಷ್ಟು ಮೀಸಲಾತಿ ಇರುತ್ತದೆ.

ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಜೊತೆಗೆ ಲಕೋಟೆ ಮೇಲೆ ಶಿಶಿಕ್ಷು ತರಬೇತಿಗಾಗಿ ಅರ್ಜಿ ಎಂದು ನಮೂದಿಸಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕುಡತಿನಿಯ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಕಚೇರಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಉಪ ಪ್ರಧಾನ ಸಂಪಾದಕರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News