Career News: ಸ್ವಾವಲಂಭಿ ಜೀವನಕ್ಕೊಂದು ಚಿಕ್ಸೂಚಿ: ಇಲ್ಲಿದೆ ಯುವಕರಿಗೊಂದು ಸುವರ್ಣಾವಕಾಶ..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಮೊಬೈಲ್ ರಿಪೇರಿ ಮತ್ತು ದುರಸ್ತಿ, ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ಮತ್ತು ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Mar 12, 2024, 08:02 PM IST
  • ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಅರ್ಜಿದಾರರು ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು
  • ಮಾರ್ಚ್ 20 ರಂದು ಸಂದರ್ಶನ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾ.25 ರಿಂದ ತರಬೇತಿ ಆರಂಭಿಸಲಾಗುವುದು
Career News: ಸ್ವಾವಲಂಭಿ ಜೀವನಕ್ಕೊಂದು ಚಿಕ್ಸೂಚಿ: ಇಲ್ಲಿದೆ ಯುವಕರಿಗೊಂದು ಸುವರ್ಣಾವಕಾಶ..! title=

ಕೊಪ್ಪಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಮೊಬೈಲ್ ರಿಪೇರಿ ಮತ್ತು ದುರಸ್ತಿ, ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ಮತ್ತು ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಒಂದು ತುಂಡು ಇದ್ದಿಲು ಸಾಕು… 5 ನಿಮಿಷದಲ್ಲಿ ಬಿಳಿ ಕೂದಲನ್ನು ಪರ್ಮನೆಂಟ್ ಆಗಿ ಕಡು ಕಪ್ಪಾಗಿಸಬಹುದು!

30 ದಿನಗಳ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್ ತರಬೇತಿ, 30 ದಿನಗಳ ಮೊಬೈಲ್ ರಿಪೇರಿ ಮತ್ತು ದುರಸ್ತಿ, 45 ದಿನಗಳ ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ತರಬೇತಿ, 10 ದಿನಗಳ ಕುರಿ ಸಾಕಾಣಿಕೆ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು.

ಇದನ್ನೂ ಓದಿ: ಈ ತರಕಾರಿ ಬೇಯಿಸಿದ ನೀರನ್ನು ಕೂದಲಿಗೆ ಹಚ್ಚಿ: 5 ದಿನದಲ್ಲಿ ಬಿಳಿಕೂದಲು ಬುಡದಿಂದಲೇ ಕಪ್ಪು ಬಣ್ಣಕ್ಕೆ ತಿರುಗುತ್ತದೆ!

ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಮಾರ್ಚ್ 20 ರಂದು ಸಂದರ್ಶನ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾ.25 ರಿಂದ ತರಬೇತಿ ಆರಂಭಿಸಲಾಗುವುದು.

ಆಸಕ್ತರು ಆಧಾರ್ ಕಾರ್ಡ, ರೇಷನ್ ಕಾರ್ಡ್, ಮಾರ್ಕ್ಸ್ ಕಾರ್ಡ್ಗಳ ಜೆರಾಕ್ಸ್ ಪ್ರತಿಗಳು ಹಾಗೂ 03 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-231038, 9483618178, 9481085217, 7259073827, 6364173983 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News