ಕೊಪ್ಪಳ : ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು ಹಾಗೂ ಜವಾನರ  (Peons) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಕ್ರಿಕೆಟ್ ಕಾಶಿ ಲಾರ್ಡ್ಸ್ ಗ್ರೌಂಡ್ ಇಟ್ಟಿಗೆ ಮೇಲೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರು..!


ಕೊಪ್ಪಳದ ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶರ ಕಚೇರಿಗೆ ಬೆರಳಚ್ಚುಗಾರರು-01, ಜವಾನರು-04 ಸೇರಿದಂತೆ ಒಟ್ಟು 05 ಹುದ್ದೆ,  ಕೊಪ್ಪಳ (ಸಿಟ್ಟಿಂಗ್ ಗಂಗಾವತಿ) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಗೆ ಬೆರಳಚ್ಚುಗಾರರು-01, ಅಟೆಂಡರ್-01 ಹಾಗೂ ಜವಾನರು-02 ಸೇರಿದಂತೆ ಒಟ್ಟು 04 ಹುದ್ದೆ, ಕೊಪ್ಪಳದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ (ಎಫ್ಟಿಎಸ್ಸಿ-1) ಕಚೇರಿಗೆ ಬೆರಳಚ್ಚುಗಾರರು-2, ಅಟೆಂಡರ್-01 ಹಾಗೂ ಜವಾನರು-01 ಸೇರಿದಂತೆ ಒಟ್ಟು 04 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ.


ನಟಿ ಚೇತನಾ ರಾಜ್ ಸಾವು ಪ್ರಕರಣ: ಶೆಟ್ಟೀಸ್ ಆಸ್ಪತ್ರೆಗೆ ಬೀಗ ಜಡಿದ ಆರೋಗ್ಯ ಇಲಾಖೆ


ಸರ್ಕಾರದ ಆದೇಶದಂತೆ ಅಟೆಂಡರ್, ಜಮೆದಾರ್, ಸ್ವೀಪರ್ ಕಂ ವಾಚ್ಮನ್ ಹುದ್ದೆಗಳನ್ನು ಜವಾನರ (Peons) ಹುದ್ದೆಗಳೆಂದು ವಿಲೀನಗೊಳಿಸಲಾಗಿರುತ್ತದೆ.  ಬೆರಳಚ್ಚುಗಾರರ ಹುದ್ದೆಗೆ ಎಸ್ಎಸ್ಎಲ್ಸಿ ಉತ್ತೀರ್ಣದ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಸೀನಿಯರ್ ಪರೀಕ್ಷೆ ಪಾಸಾಗಿರಬೇಕು.ಜವಾನರ ಹುದ್ದೆಗೆ ಎಸ್ಎಸ್ಎಲ್ಸಿ ಪಾಸಾಗಿರಬೇಕು.ಅರ್ಹ ಆಸಕ್ತ ಮಾನವ ಸಂಪನ್ಮೂಲ ಏಜೆನ್ಸಿಗಳು ಟೆಂಡರ್ ಸಲ್ಲಿಸುವಾಗ, ಯಾವ ನ್ಯಾಯಾಲಯಕ್ಕೆ ಸಂಬಂಧಿಸಿದ್ದು ಎಂದು ಲಕೋಟೆಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು.  ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ಅನ್ನು ಜುಲೈ 11 ರಂದು ಸಂಜೆ 05 ಗಂಟೆಯ ಒಳಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಕೊಪ್ಪಳ ಇವರಿಗೆ ಸಲ್ಲಿಸಬೇಕು.  ಟೆಂಡರ್ ಗಳನ್ನು ಬಿಡ್ದಾರರ ಸಮಕ್ಷಮ ಜು. 12 ರಂದು ಸಂಜೆ 5.30 ಗಂಟೆಗೆ ತೆರೆಯಲಾಗುವುದು. ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಯನ್ನು ಇದೇ ನ್ಯಾಯಾಲಯದ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.