ಖಾಸಗಿ ಚಾಲಕರಿಗೆ ಗುಡ್ ನ್ಯೂಸ್...!

ಕಳೆದ ಅನೇಕ ವರ್ಷಗಳಿಂದ ತಮಗೂ ಒಂದು ಅಭಿವೃದ್ದಿ ಮಂಡಳಿ ಬೇಕು ಅಂತಾ ಸರ್ಕಾರದ ಮುಂದೆ ಖಾಸಗಿ ಚಾಲಕರು ಬಿಗಿಪಟ್ಟು ಹಿಡಿದಿದ್ದರು. ಜೊತೆಗೆ ಹಲವು ಬಾರಿ ರಸ್ತೆಗಿಳಿದು ಹೋರಾಟವನ್ನೂ ಮಾಡಿದ್ರು.  ಆದರೆ ಸರ್ಕಾರ ಮಾತ್ರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. 

Written by - Manjunath Hosahalli | Last Updated : Nov 17, 2023, 01:22 PM IST
  • ಖಾಸಗಿ ಚಾಲಕರಿಗೆ ಗುಡ್ ನ್ಯೂಸ್...! ಚಾಲಕ ವರ್ಗದ ಬಹುದಿನದ ಹೋರಾಟಕ್ಕೆ ನೀರೆರೆದ ಸರ್ಕಾರ..!!
  • ರಾಜ್ಯದಲ್ಲಿ ಶೀಘ್ರದಲ್ಲೇ ಸ್ಥಾಪನೆ ಆಗಲಿದೆ ಚಾಲಕರ ಅಭಿವೃದ್ಧಿ ಮಂಡಳಿ....!
  • ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಮಂಡಳಿ ಸ್ಥಾಪನೆಗೆ ಮುಂದಾದ ಸರ್ಕಾರ...!
ಖಾಸಗಿ ಚಾಲಕರಿಗೆ ಗುಡ್ ನ್ಯೂಸ್...!  title=

Good News: ಖಾಸಗಿ ಸಾರಿಗೆ ಚಾಲಕರಿಗೆ ಸರ್ಕಾರ ಗುಡ್ ನ್ಯೂಸ್ ಒಂದನ್ನ ನೀಡಿದೆ‌. ಚಾಲಕರ ಹಲವು ದಿನಗಳ ಹೋರಾಟದ ಬಳಿಕೆ ಬೇಡಿಕ ಒಂದರ ಈಡೇರಿಕೆಗೆ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಜಾರಿ ಕೂಡ ಮಾಡಲಿದೆ.

ಕಳೆದ ಅನೇಕ ವರ್ಷಗಳಿಂದ ತಮಗೂ ಒಂದು ಅಭಿವೃದ್ದಿ ಮಂಡಳಿ ಬೇಕು ಅಂತಾ ಸರ್ಕಾರದ ಮುಂದೆ ಖಾಸಗಿ ಚಾಲಕರು ಬಿಗಿಪಟ್ಟು ಹಿಡಿದಿದ್ದರು. ಜೊತೆಗೆ ಹಲವು ಬಾರಿ ರಸ್ತೆಗಿಳಿದು ಹೋರಾಟವನ್ನೂ ಮಾಡಿದ್ರು.  ಆದರೆ ಸರ್ಕಾರ ಮಾತ್ರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಸದ್ಯ ಇದೀಗ ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಈ ಮೂಲಕ ಶೀಘ್ರದಲ್ಲೇ ಮಂಡಳಿ ಸ್ಥಾಪನೆಗೆ ಮುಂದಾಗಿದೆ.

ಇದನ್ನೂ ಓದಿ- GK Quiz: ಶ್ರೀರಾಮನ ಬಿಲ್ಲಿನ ಹೆಸರು ಏನಾಗಿತ್ತು ಗೊತ್ತಾ?

ಹೌದು.. ಖಾಸಗೀ ಚಾಲಕರ ಮಂಡಳಿ ಸ್ಥಾಪನೆ ಸಂಬಂಧ ಈಗಾಗಲೇ ಕಾರ್ಮಿಕ ಇಲಾಖೆ ಜೊತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತುಕತೆ ಕೂಡ ನಡೆಸಿದ್ದಾರೆ. ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಮಂಡಳಿ ಸ್ಥಾಪನೆಗೆ ಮುಂದಾಗಿರೋ ಸರ್ಕಾರ ಈಗಾಗಲೇ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಕೂಡ ಚರ್ಚೆ ನಡೆದಿದ್ದು, ಮಂಡಳಿ ಸ್ಥಾಪನೆ ಬಗ್ಗೆಯೂ ತೀರ್ಮಾನ ಆಗಿದೆ. ಕಾರ್ಮಿಕ ಇಲಾಖೆ ಅಡಿ ಪ್ರತ್ಯೆಕ ಮಂಡಳಿಗೆ ಚರ್ಚೆ ಆಗಿದ್ದು, ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲೂ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- ಕಂಬಿ ಹಿಂದೆ ಕಂಪ್ಯೂಟರ್ ಕಲಿಕೆ: ರಾಜ್ಯದಲ್ಲೇ ಮೊದಲ ಬಾರಿಗೆ ಈ ಜೈಲಿನಲ್ಲಿ ಪ್ರಯತ್ನ!!

ಇನ್ನು ಈ ಬಗ್ಗೆ ಖಾಸಗೀ ಚಾಲಕರ ಸಂಘಟನೆಗಳು ಕೂಡ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ನಾವು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು, ಈ ಬಗ್ಗೆ ಹೋರಾಟಗಳು ಆಗಿದ್ದವು. ಸದ್ಯ ಇದೆಲ್ಲದಕ್ಕೂ ಒಳ್ಳೆ ಕಾಲ ಕೂಡಿ ಬರುತ್ತಿದೆ.‌ ಸರ್ಕಾರದ ಮಟ್ಟದಲ್ಲಿ ಖಾಸಗೀ ಚಾಲಕರ ಮಂಡಳಿ ಸ್ಥಾಪನೆ ಬಗ್ಗೆ ಚರ್ಚೆ ಆಗ್ತಿದೆ. ಅದು ಅಂತಿಮವಾದ್ರೆ ನಮ್ಮ‌ ಹೋರಾಟಕ್ಕೆ ಕೊಂಚ ಪ್ರತಿಫಲ‌ ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ... ಖಾಸಗೀ ಸಾರಿಗೆ ಸಂಘಟನೆಗಳು ವರ್ಸಸ್ ಸರ್ಕಾರದ ನಡುವೆ ನಡೆಯುತ್ತಿದ್ದ ನಾ ಕೊಡೆ...‌ನೀ ಬಿಡೆ ಗುದ್ದಾಟ ಕೊನೆಯಾಗುತ್ತಿರೋದಂತು ಸುಳ್ಳಲ್ಲ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News