ಅಂಚೆ ನೇರಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಸಂದರ್ಶನ

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

Written by - Manjunath N | Last Updated : Oct 1, 2024, 06:25 PM IST
  • ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
  • ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು
 ಅಂಚೆ ನೇರಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಸಂದರ್ಶನ title=
ಸಾಂಧರ್ಭಿಕ ಚಿತ್ರ

ಬಳ್ಳಾರಿ: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ

ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಹತೆ:

ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.

ಬಳ್ಳಾರಿ ಹಾಗೂ ವಿಜಯನಗರ(ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸ ಪುರಾವೆಯನ್ನು ಹೊಂದಿರಬೇಕು. ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.

ನೇರಪ್ರತಿನಿಧಿಗಳು:

ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ಆಫೀಸರ್:

ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳು ರೂ.5000/- (ಐದು ಸಾವಿರ ಮಾತ್ರ) ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.

ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ.

ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ಇದನ್ನೂ ಓದಿ: Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!

ಬೇಕಾದ ದಾಖಲೆ:

ಆಧಾರ್‌ಕಾರ್ಡ್, ಪಾನ್‌ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು.

ನೋಂದಣಿಯ ಸಮಯ: ಬೆಳಗ್ಗೆ 10:30 ರಿಂದ 11:30 ರ ವರೆಗೆ.

ಹೆಚ್ಚಿನ ಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂ.08392-266768 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News