Job Alert: ₹45 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

NIMHANS Recruitment 2024: ಮಾರ್ಚ್​ 15 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Written by - Puttaraj K Alur | Last Updated : Mar 15, 2024, 10:51 PM IST
  • ನಿಮ್ಹಾನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಪ್ರೋಗ್ರಾಮ್​ ಕೋ-ಆರ್ಡಿನೇಟರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಮಾರ್ಚ್​ 15 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ
Job Alert: ₹45 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
NIMHANS Recruitment 2024

National Institute of Mental Health and Neuro Sciences Job Alert: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಪ್ರೋಗ್ರಾಮ್​ ಕೋ-ಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಾರ್ಚ್​ 15 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಲು ಸಿದ್ಧರಾದ ಈಶ್ವರಪ್ಪ

ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಿಯಾಟ್ರಿಕ್​ ಸೋಷಿಯಲ್ ವರ್ಕ್​/ಸೈಕಾಲಜಿಯಲ್ಲಿ ಎಂ.ಫಿಲ್, ಸೋಷಿಯಲ್ ವರ್ಕ್​​ನಲ್ಲಿ ಸ್ನಾತಕೋತ್ತರ ಪದವಿ, ಸೈಕಾಲಜಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅನುಭವ: ಅಭ್ಯರ್ಥಿಗಳು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಆತ್ಮಹತ್ಯೆ ತಡೆಗಟ್ಟುವ ಕ್ಷೇತ್ರದಲ್ಲಿ ಸಂಶೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ವೇತನ: ಮಾಸಿಕ ₹45,000

ಉದ್ಯೋಗದ ಸ್ಥಳ: ರಾಮನಗರ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಸಂದರ್ಶನ ನಡೆಯುವ ಸ್ಥಳ: ಬೋರ್ಡ್ ರೂಮ್, 4ನೇ ಮಹಡಿ, NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್ ಬೆಂಗಳೂರು-29

ಇದನ್ನೂ ಓದಿ:  ಕೇವಲ 9 ಸೀಟ್‌ಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಕಾಂಗ್ರೆಸ್‌ ಮಾರಾಟ ಮಾಡಿದೆ: ಬಿಜೆಪಿ ಆರೋಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News