ಬೆಂಗಳೂರು: ನಿರುದ್ಯೋಗಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಪೊಲೀಸ್ ಪೇದೆ ಆಗುವ ಕನಸು ಕಾಣುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಸಿಹಿಸುದ್ದಿ ಇಲ್ಲಿದೆ. ಶೀಘ್ರವೇ 6 ಸಾವಿರ ಪೊಲೀಸ್ ಪೇದೆಗಳ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ಬೆಂಗಳೂರಿನಲ್ಲಿ ಖಾಲಿ ಇರುವ 2,500 ಹಾಗೂ ರಾಜ್ಯದ ಇನ್ನುಳಿದ ಭಾಗಗಳಲ್ಲಿ ಖಾಲಿ ಇರುವಂತ 3,500 ಪೇದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಪೊಲೀಸ್ ಪೇದೆ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.


ಇದನ್ನೂ ಓದಿ: KPCL Recruitment 2023: ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ


ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ರಾಜ್ಯದ ನಿರುದ್ಯೋಗಿ ಯುವಕರಿಗೆ ಸಿಹಿಸುದ್ದಿ ನೀಡಿದ್ದಾರೆ. ‘ರಾಜ್ಯದಲ್ಲಿ ಎಲ್ಲಿ ಅಗತ್ಯವಿದೆಯೋ ಅಲ್ಲಿ ಹೊಸ ಪೊಲೀಸ್ ಠಾಣೆ ಪ್ರಾರಂಭಿಸಲು ಸರ್ಕಾರವು ಉತ್ಸುಕವಾಗಿದೆ. ಆದರೇ ಸ್ಥಳೀಯವಾಗಿ ಪ್ರಸ್ತಾವನೆ ಬರಬೇಕು. ಅಲ್ಲದೇ ರಾಜ್ಯದ ಕೆಲವೆಡೆ ಬಾಡಿಗೆ ಕಟ್ಟಗಳಲ್ಲಿ ಪೊಲೀಸ್ ಠಾಣೆಗಳಿದ್ದು, ಹಂತ ಹಂತವಾಗಿ ಹೊಸ ಕಟ್ಟಡ ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.


545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಮತ್ತೊಂದೆಡೆ ಮರು ಪರೀಕ್ಷೆ ವಿಷಯಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಹೈಕೋರ್ಟ್ ಸರ್ಕಾರದ ಅಭಿಪ್ರಾಯ ಕೇಳಿತ್ತು. ಮರು ಪರೀಕ್ಷೆ ನಡೆಸುವುದಾಗಿ ಹೇಳಲಾಗಿದೆ. ನ್ಯಾಯಾಲಯದಿಂದ  ತೀರ್ಮಾನ ಹೊರಬಂದ ನಂತರ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.  


ಇದನ್ನೂ ಓದಿ: ಹಳೆ ಬಸ್‌ಗೆ ಹೊಸ ಲುಕ್..! ನೂತನ ಬಸ್‌ಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸಾರಿಗೆ ಸಚಿವರು


ಇತ್ತೀಚೆಗೆ 490 ಪಿಎಸ್‌ಐ ನೇಮಕಾತಿ ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.   


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.