ಬೆಂಗಳೂರು: ಪ್ರಾಥಮಿಕ ಶಾಲೆಗಳಿಗೆ 13,350 ಪದವೀಧರ ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆಗಳು ನಡೆಯುತ್ತಿದೆ. ನ್ಯಾಯಾಲಯದ ಆದೇಶ ಬಂದ ಕೂಡಲೇ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಸದಸ್ಯರಾದ ಬಿ.ವೈ.ವಿಜಯೇಂದ್ರ ಮತ್ತು ಮಹೇಶ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ಈ ನೇಮಕಾತಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಈ ವಿಚಾರವಾಗಿ ವಕೀಲರ ಜೊತೆ ಸಭೆಗಳನ್ನು ನಡೆಸಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: Karnataka Budget 2023-24: ಸಿಎಂ ಸಿದ್ದರಾಮಯ್ಯನವರ ದಾಖಲೆಯ 14 ನೇ ಬಜೆಟ್ ಮಂಡನೆ ವೇಳೆ ನೀಡಿದ ಭರವಸೆಗಳೇನು?


ಈ ನೇಮಕಾತಿ ವಿಚಾರದಲ್ಲಿ ಸಣ್ಣ ಕಾನೂನಿನ ತೊಡಕಿದ್ದು, ಅಭ್ಯರ್ಥಿಗಳು ಯಾವುದೇ ರೀತಿ ಭಯಪಡುವ ಅಗತ್ಯವಿಲ್ಲ ಅಂತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ನ್ಯಾಯಾಲಯವು ಯಾವುದೇ ಕಾರಣಕ್ಕೂ ಆದೇಶ ನೀಡಬಾರದು, ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸದೆ ಮುಂದುವರಿಸುವಂತೆ ಸೂಚಿಸಿದೆ. ಇದೇ ತಿಂಗಳ 17ರಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಆ ವೇಳೆ ಸರಿಯಾದ ವಾದ ಮಂಡಿಸಿ ನೇಮಕಾತಿ ಆದೇಶದ ಅನುಮತಿ ಪಡೆದುಕೊಳ್ಳಲಾಗುವುದು ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ.


ಇದನ್ನೂ ಓದಿ: ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.