ಬಳ್ಳಾರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. 


COMMERCIAL BREAK
SCROLL TO CONTINUE READING

ಅರ್ಹತೆ:


2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿಬೇಕು. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿರಬಾರದು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು.


ಇದನ್ನೂ ಓದಿ:ಮೃಣಾಲ್ ಠಾಕೂರ್ ಡಯಟ್ ಸೀಕ್ರೆಟ್ ಗೊತ್ತಾದ್ರೆ ನಾಳೆಯಿಂದ ಅದನ್ನೇ ಫಾಲೋ ಮಾಡ್ತೀರಾ..! 


ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿರಬೇಕು.ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವವರು ಪ್ರತಿ ತಿಂಗಳು 25ನೇ ತಾರೀಖಿನ ಒಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಪೆÇೀರ್ಟಲ್‍ನಲ್ಲಿ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ.


ಯಾವುದೇ ತಿಂಗಳು ತಮಗೆ ನಿರುದ್ಯೋಗ ಭತ್ಯೆ ಸಂದಾಯವಾಗದಿದ್ದರೆ ತಮ್ಮ ಮೂಲ ದಾಖಲೆಗಳನ್ನು ಈ ಕೆಳಕಂಡ ಕಚೇರಿಗಳಲ್ಲಿ ಪರಿಶೀಲನೆಗೆ ಒಳಪಡಿಸಬೇಕು.ಡಿಡಿಪಿಐ ಕಚೇರಿಯಲ್ಲಿ ಎಸ್‍ಎಸ್‍ಎಲ್‍ಸಿ ಪ್ರಮಾಣ ಪತ್ರ, ಡಿಡಿಪಿಯು ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪ್ರಮಾಣ ಪತ್ರ ಹಾಗೂ ಡಿಪ್ಲೋಮಾ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ತಮ್ಮ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.8861866752 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.