ಬೆಂಗಳೂರು: ಬೆಂಗಳೂರಿನ ಹೊರವಲಯ ಆನೇಕಲ್ ನಲ್ಲಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಆನೇಕಲ್ ಪಟ್ಟಣದ ವೀವರ್ಸ್ ಕಾಲೋನಿ ನಿವಾಸಿಗಳಾದ ಸೋಮಶೇಖರ್(27), ರಾಘವೇಂದ್ರ(25) ಎಂದು ಗುರುತಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ


ಈ ಇಬ್ಬರು ಆರೋಪಿಗಳು ಅಲಯನ್ಸ್ ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿಯನ್ನು ಆಧರಿಸಿ ಆನೇಕಲ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ಯಾಕೆಟ್ ನಲ್ಲಿ ಐದಾರು ಗಾಂಜಾ ಪತ್ತೆಯಾಗಿದೆ.ವಿಚಾರಣೆ ಬಳಿಕ ಆನೇಕಲ್ ಪಟ್ಟಣದ ಅಯೋಧ್ಯೆ ನಗರದ ಮನೆಯೊಂದರಲ್ಲಿ ಸಂಗ್ರಹಿಸಿರುವ ಮಾಹಿತಿ ಲಭಿಸಿದೆ.


ಇದನ್ನೂ ಓದಿ: Priyanka Chopra : ಪ್ರಿಯಾಂಕಾ ಬಾಲಿವುಡ್ ತೊರೆಯಲು ಕಾರಣ ಕರಣ್‌ ಜೋಹರ್‌!? ಹೊರಬಿತ್ತು ಅಸಲಿ ಸತ್ಯ


ತದನಂತರ ತಹಶಿಲ್ದಾರ್ ನೇತೃತ್ವದಲ್ಲಿ ಮನೆ ಪರಿಶೀಲನೆ ನಡೆಸಲಾಗಿದ್ದು,ಸುಮಾರು 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾ ಪತ್ತೆಯಾಗಿದೆ.ಇದನ್ನು ಈಗ ಪೊಲೀಸರು ವಶಕ್ಕೆ ತೆಗೆದುಕೊಂಡು ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಅ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.