ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ..!

ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ಈ ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ದರ್ಗಾಗೆ ಕಾರು ಗುದ್ದಿ ಈ ದುರ್ಘಟನೆ ನಡೆದಿದೆ.

Written by - Zee Kannada News Desk | Last Updated : Aug 7, 2022, 12:02 PM IST
  • ಹುಬ್ಬಳ್ಳಿ-ಪೂಣಾ ಬೆಂಗಳೂರು ರಸ್ತೆಯಲ್ಲಿ ಭಾನುವಾರ ಭೀಕರ ಕಾರು ಅಪಘಾತ
  • ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ
  • ಕುಂದಗೋಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಖಾಕಿಪಡೆಯಿಂದ ತನಿಖೆ
ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ..! title=
ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ-ಪೂಣಾ ಬೆಂಗಳೂರು ರಸ್ತೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ಈ ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ದರ್ಗಾಗೆ ಕಾರು ಗುದ್ದಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: BBMP Chief commissioner : ಕಳೆದ ಭಾರಿಯಂತೆ ಈ ಭಾರಿಯುವು ವಾರ್ಡಿಗೆ ಒಂದೇ ಗಣೇಶ!?

ಕಾರು ಅಪಘಾತಕ್ಕೆ ಪತಿ, ಪತ್ನಿ ಮತ್ತು ಅಳಿಯ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದವರನ್ನು ಹನಮಂತಪ್ಪ ಬೇವಿನಕಟ್ಟಿ, ಪತ್ನಿ ರೇಣುಕಾ ಬೇವಿನಕಟ್ಟಿ, ಅಳಿಯ ರವೀಂದ್ರ ಎಂದು ಗುರುತಿಸಲಾಗಿದೆ.

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಂದಗೋಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.  

ಇದನ್ನೂ ಓದಿ: KS Eshwarappa : 'ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ‌ ಒಂದಾಗುವ ಪ್ರಶ್ನೆ ಇಲ್ಲ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News